<p><strong>ಲಖನೌ: </strong>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಸೈಫೈ ಕ್ಷೇತ್ರದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದ್ದು, ಪಕ್ಷ ಅಧಿಕಾರಕ್ಕೆ ಬರುವುದು ಖಚಿತ’ ಎಂದಿದ್ದಾರೆ.</p>.<p>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಭಾನುವಾರ) ಆರಂಭಗೊಂಡಿದೆ. 59 ಕ್ಷೇತ್ರಗಳಲ್ಲಿ 627 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.</p>.<p>403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಎರಡು ಹಂತದ (ಫೆಬ್ರುವರಿ 10 ಮತ್ತು 14ರಂದು) ಮತದಾನ ಈಗಾಗಲೇ ಮುಗಿದಿದೆ. ಫೆಬ್ರುವರಿ 23, 27, ಮಾರ್ಚ್ 3 ಮತ್ತು 7ರಂದು ಉಳಿದ ಹಂತಗಳ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.</p>.<p><strong>ಓದಿ...<a href="https://www.prajavani.net/india-news/congress-to-form-govt-in-uttarakhand-will-request-sonia-gandhi-to-decide-cm-face-harish-rawat-912631.html" target="_blank">ಉತ್ತರಾಖಂಡ: ಸಿ.ಎಂ ಅಭ್ಯರ್ಥಿ ಘೋಷಿಸಲು ಸೋನಿಯಾ ಗಾಂಧಿಗೆ ಮನವಿ -ಹರೀಶ್ ರಾವತ್</a></strong></p>.<p>ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸ್ಪರ್ಧಿಸಿರುವ ಕರ್ಹಾಲ್ ಕ್ಷೇತ್ರದ ಮತದಾನವೂ ಇಂದೇ ನಡೆಯಲಿದೆ. ಈ ಕ್ಷೇತ್ರದಿಂದ ಕೇಂದ್ರ ಸಚಿವ ಎಸ್.ಪಿ. ಸಿಂಗ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಎಸ್ಪಿ ಸ್ಥಾಪಕ ಮುಲಾಯಂ ಸಿಂಗ್ ಅವರು ಮಗನ ಪರವಾಗಿ ಮತಯಾಚಿಸಿದ್ದರು. ಅಖಿಲೇಶ್ ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಭವಿಷ್ಯವೂ ನಿರ್ಧಾರವಾಗಲಿದೆ.</p>.<p>2017ರ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್ಪಿ 47, ಬಿಎಸ್ಪಿ 19 ಕ್ಷೇತ್ರಗಳಲ್ಲಿ ಜಯ ಕಂಡರೆ, ಕಾಂಗ್ರೆಸ್ ಕೇವಲ 7 ಕಡೆ ಖಾತೆ ತೆರೆದಿತ್ತು.</p>.<p><strong>ಓದಿ...<a href="https://www.prajavani.net/india-news/k-chandrasekhar-rao-to-meet-uddhav-thackeray-and-pawar-today-in-mumbai-amid-third-front-buzz-912629.html" target="_blank">ತೃತೀಯ ರಂಗ ರಚನೆ: ಇಂದು ಮುಂಬೈಯಲ್ಲಿ ಠಾಕ್ರೆ, ಪವಾರ್ ಭೇಟಿಯಾಗಲಿರುವ ಕೆಸಿಆರ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಸೈಫೈ ಕ್ಷೇತ್ರದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದ್ದು, ಪಕ್ಷ ಅಧಿಕಾರಕ್ಕೆ ಬರುವುದು ಖಚಿತ’ ಎಂದಿದ್ದಾರೆ.</p>.<p>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಭಾನುವಾರ) ಆರಂಭಗೊಂಡಿದೆ. 59 ಕ್ಷೇತ್ರಗಳಲ್ಲಿ 627 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.</p>.<p>403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಎರಡು ಹಂತದ (ಫೆಬ್ರುವರಿ 10 ಮತ್ತು 14ರಂದು) ಮತದಾನ ಈಗಾಗಲೇ ಮುಗಿದಿದೆ. ಫೆಬ್ರುವರಿ 23, 27, ಮಾರ್ಚ್ 3 ಮತ್ತು 7ರಂದು ಉಳಿದ ಹಂತಗಳ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.</p>.<p><strong>ಓದಿ...<a href="https://www.prajavani.net/india-news/congress-to-form-govt-in-uttarakhand-will-request-sonia-gandhi-to-decide-cm-face-harish-rawat-912631.html" target="_blank">ಉತ್ತರಾಖಂಡ: ಸಿ.ಎಂ ಅಭ್ಯರ್ಥಿ ಘೋಷಿಸಲು ಸೋನಿಯಾ ಗಾಂಧಿಗೆ ಮನವಿ -ಹರೀಶ್ ರಾವತ್</a></strong></p>.<p>ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸ್ಪರ್ಧಿಸಿರುವ ಕರ್ಹಾಲ್ ಕ್ಷೇತ್ರದ ಮತದಾನವೂ ಇಂದೇ ನಡೆಯಲಿದೆ. ಈ ಕ್ಷೇತ್ರದಿಂದ ಕೇಂದ್ರ ಸಚಿವ ಎಸ್.ಪಿ. ಸಿಂಗ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಎಸ್ಪಿ ಸ್ಥಾಪಕ ಮುಲಾಯಂ ಸಿಂಗ್ ಅವರು ಮಗನ ಪರವಾಗಿ ಮತಯಾಚಿಸಿದ್ದರು. ಅಖಿಲೇಶ್ ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಭವಿಷ್ಯವೂ ನಿರ್ಧಾರವಾಗಲಿದೆ.</p>.<p>2017ರ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್ಪಿ 47, ಬಿಎಸ್ಪಿ 19 ಕ್ಷೇತ್ರಗಳಲ್ಲಿ ಜಯ ಕಂಡರೆ, ಕಾಂಗ್ರೆಸ್ ಕೇವಲ 7 ಕಡೆ ಖಾತೆ ತೆರೆದಿತ್ತು.</p>.<p><strong>ಓದಿ...<a href="https://www.prajavani.net/india-news/k-chandrasekhar-rao-to-meet-uddhav-thackeray-and-pawar-today-in-mumbai-amid-third-front-buzz-912629.html" target="_blank">ತೃತೀಯ ರಂಗ ರಚನೆ: ಇಂದು ಮುಂಬೈಯಲ್ಲಿ ಠಾಕ್ರೆ, ಪವಾರ್ ಭೇಟಿಯಾಗಲಿರುವ ಕೆಸಿಆರ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>