<p><strong>ಲಖನೌ:</strong> ವಿವಿಧ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಆಗುತ್ತಿರುವ ಚುನಾವಣಾ ಸಮೀಕ್ಷೆಗಳು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಹಾಗಾಗಿ, ಚುನಾವಣಾ ಸಮೀಕ್ಷೆಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಸಮಾಜವಾದಿ ಪಕ್ಷವು (ಎಸ್ಪಿಇ) ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.</p>.<p>ಫೆಬ್ರುವರಿ 10ರಂದು ನಡೆಯಲಿರುವ ಮೊದಲ ಹಂತದ ಮತದಾನದ ನಾಮಪತ್ರ ಪ್ರಕ್ರಿಯೆ ಮುಗಿದಿದೆ. ಹಾಗಿದ್ದರೂ ವಿವಿಧ ಸುದ್ದಿ ವಾಹಿನಿಗಳು ಜನಮತ ಸಮೀಕ್ಷೆಯನ್ನು ಪ್ರಸಾರ ಮಾಡುತ್ತಿವೆ ಎಂದು ಎಸ್ಪಿ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ನರೇಶ್ ಉತ್ತಮ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.</p>.<p>‘ಜನಮತ ಸಮೀಕ್ಷೆಗಳು ಜನರ ಮನದಲ್ಲಿ ಗೊಂದಲ ಮೂಡಿಸುತ್ತಿವೆ. ಇವು ಚುನಾವಣಾ ಪ್ರಕ್ರಿಯೆಯನ್ನು ಬಾಧಿಸುತ್ತಿವೆ. ಹಾಗೆ ಮಾಡುವುದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ’ ಎಂದು ನರೇಶ್ ಅವರು ಪತ್ರದಲ್ಲಿ ಹೇಳಿದ್ದಾರೆ.</p>.<p>ಜನಮತ ಸಮೀಕ್ಷೆಗಳ ಬಗ್ಗೆ ಇತರ ಪಕ್ಷಗಳು ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. ಜನಮತ ಸಮೀಕ್ಷೆ ಪ್ರಸಾರದಲ್ಲಿ ತಪ್ಪೇನೂ ಇಲ್ಲ, ಅದು ನೀತಿ ಸಂಹಿತೆಯ ಉಲ್ಲಂಘನೆ ಅಲ್ಲ ಎಂಬುದು ಬಿಜೆಪಿಯ ಅಭಿಪ್ರಾಯವಾಗಿದೆ.</p>.<p><a href="https://www.prajavani.net/india-news/bjp-will-win-uttar-pradesh-polls-and-comes-in-power-says-keshav-prasad-maurya-904341.html" itemprop="url">ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಕೇಶವ ಪ್ರಸಾದ್ ಮೌರ್ಯ </a></p>.<p><a href="https://www.prajavani.net/india-news/up-election-akhilesh-yadav-chose-karhal-seat-for-his-assembly-904233.html" itemprop="url">UP Elections: ಎಸ್ಪಿ ಭದ್ರಕೋಟೆ ಕರ್ಹಲ್ನಿಂದ ಅಖಿಲೇಶ್ ಸ್ಪರ್ಧೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ವಿವಿಧ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಆಗುತ್ತಿರುವ ಚುನಾವಣಾ ಸಮೀಕ್ಷೆಗಳು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಹಾಗಾಗಿ, ಚುನಾವಣಾ ಸಮೀಕ್ಷೆಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಸಮಾಜವಾದಿ ಪಕ್ಷವು (ಎಸ್ಪಿಇ) ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.</p>.<p>ಫೆಬ್ರುವರಿ 10ರಂದು ನಡೆಯಲಿರುವ ಮೊದಲ ಹಂತದ ಮತದಾನದ ನಾಮಪತ್ರ ಪ್ರಕ್ರಿಯೆ ಮುಗಿದಿದೆ. ಹಾಗಿದ್ದರೂ ವಿವಿಧ ಸುದ್ದಿ ವಾಹಿನಿಗಳು ಜನಮತ ಸಮೀಕ್ಷೆಯನ್ನು ಪ್ರಸಾರ ಮಾಡುತ್ತಿವೆ ಎಂದು ಎಸ್ಪಿ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ನರೇಶ್ ಉತ್ತಮ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.</p>.<p>‘ಜನಮತ ಸಮೀಕ್ಷೆಗಳು ಜನರ ಮನದಲ್ಲಿ ಗೊಂದಲ ಮೂಡಿಸುತ್ತಿವೆ. ಇವು ಚುನಾವಣಾ ಪ್ರಕ್ರಿಯೆಯನ್ನು ಬಾಧಿಸುತ್ತಿವೆ. ಹಾಗೆ ಮಾಡುವುದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ’ ಎಂದು ನರೇಶ್ ಅವರು ಪತ್ರದಲ್ಲಿ ಹೇಳಿದ್ದಾರೆ.</p>.<p>ಜನಮತ ಸಮೀಕ್ಷೆಗಳ ಬಗ್ಗೆ ಇತರ ಪಕ್ಷಗಳು ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. ಜನಮತ ಸಮೀಕ್ಷೆ ಪ್ರಸಾರದಲ್ಲಿ ತಪ್ಪೇನೂ ಇಲ್ಲ, ಅದು ನೀತಿ ಸಂಹಿತೆಯ ಉಲ್ಲಂಘನೆ ಅಲ್ಲ ಎಂಬುದು ಬಿಜೆಪಿಯ ಅಭಿಪ್ರಾಯವಾಗಿದೆ.</p>.<p><a href="https://www.prajavani.net/india-news/bjp-will-win-uttar-pradesh-polls-and-comes-in-power-says-keshav-prasad-maurya-904341.html" itemprop="url">ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಕೇಶವ ಪ್ರಸಾದ್ ಮೌರ್ಯ </a></p>.<p><a href="https://www.prajavani.net/india-news/up-election-akhilesh-yadav-chose-karhal-seat-for-his-assembly-904233.html" itemprop="url">UP Elections: ಎಸ್ಪಿ ಭದ್ರಕೋಟೆ ಕರ್ಹಲ್ನಿಂದ ಅಖಿಲೇಶ್ ಸ್ಪರ್ಧೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>