ಮಂಗಳವಾರ, ಮಾರ್ಚ್ 21, 2023
21 °C

ಸಮ್ಮದ್‌ ಶಿಖರ್‌ಜಿ ಪ್ರವಾಸಿ ತಾಣವಾಗಿ ಪರಿವರ್ತಿಸದಿರಲು ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜೈನರ ಪವಿತ್ರ ಸ್ಥಳ ಸಮ್ಮದ್‌ ಶಿಖರ್‌ಜಿಯನ್ನು ಪ್ರವಾಸಿ ಸ್ಥಳವಾಗಿ ಪರಿವರ್ತಿಸದಿರಲು ಕೇಂದ್ರ ಮತ್ತು ಜಾರ್ಖಂಡ್‌ ಸರ್ಕಾರಗಳು ತೀರ್ಮಾನಿಸಿವೆ ಎಂದು ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಇಕ್ಬಾಲ್‌ ಸಿಂಗ್‌ ಲಾಲ್‌ಪುರ ಅವರು ಬುಧವಾರ ತಿಳಿಸಿದರು.

ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ ಎಂದು ತಿಳಿಸಿದರು.

ಸಮ್ಮದ್‌ ಶಿಖರ್‌ಜಿ ಎಂಬುದು ಜೈನರ ಪವಿತ್ರ ಸ್ಥಳ. ಇದನ್ನು ಪ್ರವಾಸಿ ತಾಣವಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು.

ಕೇಂದ್ರ ಸರ್ಕಾರ ಜ.5ರಂದು ಇಲ್ಲಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆ ನಡೆಸದಂತೆ ತಡೆಯಾಜ್ಞೆ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು