ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮ್ಮದ್‌ ಶಿಖರ್‌ಜಿ ಪ್ರವಾಸಿ ತಾಣವಾಗಿ ಪರಿವರ್ತಿಸದಿರಲು ನಿರ್ಧಾರ

Last Updated 18 ಜನವರಿ 2023, 14:37 IST
ಅಕ್ಷರ ಗಾತ್ರ

ನವದೆಹಲಿ: ಜೈನರ ಪವಿತ್ರ ಸ್ಥಳ ಸಮ್ಮದ್‌ ಶಿಖರ್‌ಜಿಯನ್ನು ಪ್ರವಾಸಿ ಸ್ಥಳವಾಗಿ ಪರಿವರ್ತಿಸದಿರಲು ಕೇಂದ್ರ ಮತ್ತು ಜಾರ್ಖಂಡ್‌ ಸರ್ಕಾರಗಳು ತೀರ್ಮಾನಿಸಿವೆ ಎಂದು ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಇಕ್ಬಾಲ್‌ ಸಿಂಗ್‌ ಲಾಲ್‌ಪುರ ಅವರು ಬುಧವಾರ ತಿಳಿಸಿದರು.

ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ ಎಂದು ತಿಳಿಸಿದರು.

ಸಮ್ಮದ್‌ ಶಿಖರ್‌ಜಿ ಎಂಬುದು ಜೈನರ ಪವಿತ್ರ ಸ್ಥಳ. ಇದನ್ನು ಪ್ರವಾಸಿ ತಾಣವಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು.

ಕೇಂದ್ರ ಸರ್ಕಾರ ಜ.5ರಂದು ಇಲ್ಲಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆ ನಡೆಸದಂತೆ ತಡೆಯಾಜ್ಞೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT