ನವದೆಹಲಿ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಸಾಧಕರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪ್ರದಾನ ಮಾಡಿದರು.
2019ನೇ ಸಾಲಿನ ಪ್ರಶಸ್ತಿ ಯನ್ನು ವಿನಾಯಕ ತೊರವಿ (ಹಿಂದೂಸ್ಥಾನಿ ಸಂಗೀತ), ವಸುಂಧರಾ ದೊರೆಸ್ವಾಮಿ (ಭರತನಾಟ್ಯ), ಮಂಜು ಭಾರ್ಗವಿ (ಕೂಚಿಪುಡಿ) ಸ್ವೀಕರಿಸಿದರು. 2020ನೇ ಸಾಲಿನ ಪ್ರಶಸ್ತಿಯನ್ನು ಆರ್.ಕೆ.ಪದ್ಮನಾಭ (ಕರ್ನಾಟಕ ಸಂಗೀತ), ಎಸ್.ಜಿ.ಲಕ್ಷ್ಮಿದೇವಮ್ಮ (ಜನಪದ), ಆರತಿ ಅಂಕಲಿಕರ್ (ಹಿಂದೂಸ್ಥಾನಿ ಸಂಗೀತ), 2021ನೇ ಸಾಲಿನ ಪ್ರಶಸ್ತಿಯನ್ನು ರವೀಂದ್ರ ಯಾವಗಲ್ (ತಬಲಾ), ಎಚ್.ಆರ್.ಲೀಲಾವತಿ (ಸುಗಮ ಸಂಗೀತ), ಗರ್ತಿಕೆರೆ ರಾಘಣ್ಣ (ಜನಪದ) ಹಾಗೂ ಡಿ.ಬಾಲಕೃಷ್ಣ (ವೀಣೆ) ಅವರಿಗೆ ಪ್ರದಾನ ಮಾಡಲಾಯಿತು.
ರಂಗಭೂಮಿ- ವಸ್ತ್ರ ವಿನ್ಯಾಸ ವಿಭಾಗದಲ್ಲಿ 2020ರ ಪ್ರಶಸ್ತಿಯನ್ನು ಪುರುಷೋತ್ತಮ ತಲವಾಟ ಸ್ವೀಕರಿಸಿದರು. 500ಕ್ಕೂ ಹೆಚ್ಚು ನಾಟಕಗಳಿಗೆ ನೇಪಥ್ಯ ಕಲಾವಿದರಾಗಿ, ಅನೇಕ ನಾಟಕಗಳ ನಿರ್ದೇಶಕರಾಗಿ, ವಿನ್ಯಾಸಕಾರರಾಗಿ, ನಟರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.