ರಾವುತ್ ಅವರು ಮಾಡಿರುವ ಟ್ವೀಟ್ ಉಲ್ಲೇಖಿಸಿ ಮಹಾರಾಷ್ಟ್ರ ಬಿಜೆಪಿಯ ಹಲವು ನಾಯಕರೂ ಹೇಳಿಕೆ ನೀಡಿದ್ದಾರೆ. ‘ಸಂಜಯ್ ರಾವುತ್ ಅವರು ಅನಗತ್ಯವಾಗಿ ಬಾಳಾಸಾಹೇಬ್ ಠಾಕ್ರೆ ಅವರ ಹೆಸರನ್ನು ಮಧ್ಯ ತರುತ್ತಿದ್ದಾರೆ ಮತ್ತು ಸೇನಾ ಕಾರ್ಯಕರ್ತರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ತಪ್ಪು ಮಾಡಿಲ್ಲ ಎಂದಾದರೆ ಅವರು ಯಾವುದಕ್ಕೂ ಹೆದರಬಾರದು. ಸರ್ಕಾರ ಮತ್ತು ನ್ಯಾಯಾಂಗದ ಮೇಲೆ ಜನರು ವಿಶ್ವಾಸ ಇರಿಸಬೇಕು’ ಎಂದು ಮಹಾರಾಷ್ಟ್ರ ಮಾಜಿ ಸಚಿವ ಗಿರೀಶ್ ಮಹಾಜನ್ ಅವರು ಹೇಳಿದ್ದಾರೆ.