<p class="title"><strong>ಮುಂಬೈ</strong>:ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ದಂಪತಿ ಸುಮಾರು ₹100 ಕೋಟಿಯ ‘ಶೌಚಾಲಯ ಹಗರಣ’ದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದ ಶಿವಸೇನಾ ಸಂಸದ ಸಂಜಯ್ ರಾವುತ್ ವಿರುದ್ಧಕಿರಿಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಹೈಕೋರ್ಟಿನಲ್ಲಿ ಸೋಮವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.</p>.<p class="bodytext">ರಾವುತ್ ಅವರು ₹100 ಕೋಟಿ ಪರಿಹಾರ ಪಾವತಿಸಬೇಕು ಅಥವಾ ಈ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಠೇವಣಿ ಇಡಲು ನಿರ್ದೇಶನ ನೀಡುವಂತೆ ಕೋರಿ ಅವರು ಹೈಕೋರ್ಟಿಗೆ ಮನವಿ ಸಲ್ಲಿಸಿದರು.</p>.<p class="bodytext">‘ರಾವುತ್ ಅವರು ಪದೇ ಪದೇ ನನ್ನ ಮತ್ತು ನನ್ನ ಪತಿ ವಿರುದ್ಧ ಸಾರ್ವಜನಿಕವಾಗಿಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ. ಅದರಲ್ಲೂ ಸುಮಾರು ₹100 ಕೋಟಿಯ ಶೌಚಾಲಯ ಹಗರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಿದ್ದಾರೆ. ರಾವುತ್ ನನ್ನ ಮತ್ತು ನನ್ನ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ನಿರ್ಬಂಧಿಸಿ,ಮಧ್ಯಂತರ ಪರಿಹಾರ ನೀಡಬೇಕು’ ಎಂದೂ ಮೇಧಾ ನ್ಯಾಯಾಲಯವನ್ನು ಕೋರಿದ್ದಾರೆ.</p>.<p class="bodytext">ಈ ಅರ್ಜಿ ವಿಚಾರಣೆಯ ದಿನಾಂಕವನ್ನು ಹೈಕೋರ್ಟ್ ಇನ್ನೂ ನಿಗದಿಪಡಿಸಿಲ್ಲ.</p>.<p>‘ಮಹಾರಾಷ್ಟ್ರದ ರಾಜಧಾನಿ ಮುಂಬೈ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಇದರಲ್ಲಿ ಬಿಜೆಪಿಯ ಮಾಜಿ ಸಂಸದಕಿರಿಟ್ಸೋಮಯ್ಯಮತ್ತು ಇತರ ಮುಖಂಡರು, ಬಿಲ್ಡರ್ಗಳು, ಉದ್ಯಮಿಗಳ ಗುಂಪು ಭಾಗಿಯಾಗಿದೆ’ ಎಂದು ಸಂಜಯ್ ರಾವುತ್ ಇತ್ತೀಚೆಗಷ್ಟೇ ಗಂಭೀರ ಆರೋಪವನ್ನೂ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ</strong>:ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ದಂಪತಿ ಸುಮಾರು ₹100 ಕೋಟಿಯ ‘ಶೌಚಾಲಯ ಹಗರಣ’ದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದ ಶಿವಸೇನಾ ಸಂಸದ ಸಂಜಯ್ ರಾವುತ್ ವಿರುದ್ಧಕಿರಿಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಹೈಕೋರ್ಟಿನಲ್ಲಿ ಸೋಮವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.</p>.<p class="bodytext">ರಾವುತ್ ಅವರು ₹100 ಕೋಟಿ ಪರಿಹಾರ ಪಾವತಿಸಬೇಕು ಅಥವಾ ಈ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಠೇವಣಿ ಇಡಲು ನಿರ್ದೇಶನ ನೀಡುವಂತೆ ಕೋರಿ ಅವರು ಹೈಕೋರ್ಟಿಗೆ ಮನವಿ ಸಲ್ಲಿಸಿದರು.</p>.<p class="bodytext">‘ರಾವುತ್ ಅವರು ಪದೇ ಪದೇ ನನ್ನ ಮತ್ತು ನನ್ನ ಪತಿ ವಿರುದ್ಧ ಸಾರ್ವಜನಿಕವಾಗಿಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ. ಅದರಲ್ಲೂ ಸುಮಾರು ₹100 ಕೋಟಿಯ ಶೌಚಾಲಯ ಹಗರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಿದ್ದಾರೆ. ರಾವುತ್ ನನ್ನ ಮತ್ತು ನನ್ನ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ನಿರ್ಬಂಧಿಸಿ,ಮಧ್ಯಂತರ ಪರಿಹಾರ ನೀಡಬೇಕು’ ಎಂದೂ ಮೇಧಾ ನ್ಯಾಯಾಲಯವನ್ನು ಕೋರಿದ್ದಾರೆ.</p>.<p class="bodytext">ಈ ಅರ್ಜಿ ವಿಚಾರಣೆಯ ದಿನಾಂಕವನ್ನು ಹೈಕೋರ್ಟ್ ಇನ್ನೂ ನಿಗದಿಪಡಿಸಿಲ್ಲ.</p>.<p>‘ಮಹಾರಾಷ್ಟ್ರದ ರಾಜಧಾನಿ ಮುಂಬೈ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಇದರಲ್ಲಿ ಬಿಜೆಪಿಯ ಮಾಜಿ ಸಂಸದಕಿರಿಟ್ಸೋಮಯ್ಯಮತ್ತು ಇತರ ಮುಖಂಡರು, ಬಿಲ್ಡರ್ಗಳು, ಉದ್ಯಮಿಗಳ ಗುಂಪು ಭಾಗಿಯಾಗಿದೆ’ ಎಂದು ಸಂಜಯ್ ರಾವುತ್ ಇತ್ತೀಚೆಗಷ್ಟೇ ಗಂಭೀರ ಆರೋಪವನ್ನೂ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>