<p><strong>ಗಾಜಿಯಾಬಾದ್:</strong> ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೆಹಲಿ – ಉತ್ತರ ಪ್ರದೇಶ ರಾಜ್ಯದ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಶಿವಸೇನಾ ಸಂಸದ ಸಂಜಯ್ ರಾವುತ್ ಮಂಗಳವಾರ ಭೇಟಿ ಮಾಡಿದರು.</p>.<p>ಪ್ರತಿಭಟನಾ ಸ್ಥಳದಲ್ಲಿ ಕೇಂದ್ರ ಸರ್ಕಾರ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸುತ್ತಿರುವ ಹೊತ್ತಲ್ಲಿ, ಸಂಜಯ್ ರಾವುತ್ ಪ್ರತಿಭಟನಾ ಸ್ಥಳ ಗಾಜಿಪುರ ತಲುಪಿ, ಪ್ರತಿಭಟನಾ ನಿರತ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಇತರೆ ರೈತರ ಮುಖಂಡರನ್ನು ಭೇಟಿಯಾದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜ.26ರ ಘಟನೆ ನಡೆದ ನಂತರ, ಸರ್ಕಾರ ರೈತ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದೆ. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತ ರೈತರೊಟ್ಟಿಗೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯವಾಗಿದೆ. ಇಡೀ ಮಹಾರಾಷ್ಟ್ರ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿದೆ’ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/no-formal-talks-with-govt-until-harassment-stops-detained-farmers-freed-samyukt-kisan-morcha-801743.html" target="_blank">ಬಂಧಿತರನ್ನು ಬಿಡುಗಡೆ ಮಾಡುವವರೆಗೆ ಮಾತುಕತೆ ಸಾಧ್ಯವಿಲ್ಲ: ಕಿಸಾನ್ ಮೋರ್ಚಾ ಪಟ್ಟು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್:</strong> ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೆಹಲಿ – ಉತ್ತರ ಪ್ರದೇಶ ರಾಜ್ಯದ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಶಿವಸೇನಾ ಸಂಸದ ಸಂಜಯ್ ರಾವುತ್ ಮಂಗಳವಾರ ಭೇಟಿ ಮಾಡಿದರು.</p>.<p>ಪ್ರತಿಭಟನಾ ಸ್ಥಳದಲ್ಲಿ ಕೇಂದ್ರ ಸರ್ಕಾರ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸುತ್ತಿರುವ ಹೊತ್ತಲ್ಲಿ, ಸಂಜಯ್ ರಾವುತ್ ಪ್ರತಿಭಟನಾ ಸ್ಥಳ ಗಾಜಿಪುರ ತಲುಪಿ, ಪ್ರತಿಭಟನಾ ನಿರತ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಇತರೆ ರೈತರ ಮುಖಂಡರನ್ನು ಭೇಟಿಯಾದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜ.26ರ ಘಟನೆ ನಡೆದ ನಂತರ, ಸರ್ಕಾರ ರೈತ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದೆ. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತ ರೈತರೊಟ್ಟಿಗೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯವಾಗಿದೆ. ಇಡೀ ಮಹಾರಾಷ್ಟ್ರ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿದೆ’ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/no-formal-talks-with-govt-until-harassment-stops-detained-farmers-freed-samyukt-kisan-morcha-801743.html" target="_blank">ಬಂಧಿತರನ್ನು ಬಿಡುಗಡೆ ಮಾಡುವವರೆಗೆ ಮಾತುಕತೆ ಸಾಧ್ಯವಿಲ್ಲ: ಕಿಸಾನ್ ಮೋರ್ಚಾ ಪಟ್ಟು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>