ಕಾಶ್ಮೀರಿ ಪಂಡಿತ ಸಮುದಾಯದ ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ‘ಗೃಹ ಸಚಿವಾಲಯವು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪಾಕಿಸ್ತಾನದತ್ತ ಬೆರಳು ತೋರಿಸುವ ಬದಲು ಕಾಶ್ಮೀರಿ ಪಂಡಿತರಿಗಾಗಿ ನೀವೇನು ಮಾಡಬಹುದು ಎಂಬುದನ್ನು ಮಾಡಿ ತೋರಿಸಿ’ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.