ಅಹಮದಾಬಾದ್(ಪಿಟಿಐ): 2002ರಲ್ಲಿ ನಡೆದಿದ್ದ ಕೋಮುಗಲಭೆಯಲ್ಲಿ ಅಮಾಯಕರನ್ನು ಆರೋಪಿಗಳಾಗಿಸಲು ಸಂಚು ಮಾಡಿದ್ದ ಆರೋಪದಡಿ ಗುಜರಾತ್ ಪೊಲೀಸರು ಮಂಗಳವಾರ ಬಂಧಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ನ್ಯಾಯಾಲಯ ಬುಧವಾರ ಏಳು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಈಗಾಗಲೇ ಮತ್ತೊಂದು ಪ್ರಕರಣ ಸಂಬಂಧ ಜೈಲಿನಲ್ಲಿದ್ದ ಸಂಜೀವ್ ಭಟ್ ಅವರನ್ನು ವಾರಂಟ್ ಹಾಜರುಪಡಿಸಿ ತನಿಖಾಧಿಕಾರಿಗಳು ಮತ್ತೆ ವಶಕ್ಕೆ ಪಡೆದಿದ್ದರು.
ಗುಜರಾತ್ ಪೊಲೀಸ್ನ ವಿಶೇಷ ತನಿಖಾ ತಂಡ ಈ ಪ್ರಕರಣದ ಸಂಬಂಧ ಬಂಧಿಸಿರುವ ಮೂರನೇ ಆರೋಪಿ ಸಂಜೀವ್ ಭಟ್. ಈ ಹಿಂದೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಡಿಜಿಪಿ ಆರ್.ಬಿ.ಶ್ರೀಕುಮಾರ್ ಅವರನ್ನು ಬಂಧಿಸಲಾಗಿತ್ತು.