‘ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಮಧ್ಯ ಪ್ರವೇಶದ ಬಳಿಕ ರಥಿನಾವೆಲ್ ಅವರನ್ನು ಮರು ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಚರಕ ಶಪಥ ಬೋಧಿಸಿದ ವಿಚಾರವಾಗಿ ಅವರು ವಿಷಾದ ವ್ಯಕ್ತಪಡಿಸಿದ್ದರು. ಅಲ್ಲದೆ, ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಅವರು ಮಾಡಿದ್ದ ಉತ್ತಮ ಕೆಲಸವನ್ನೂ ಪರಿಗಣಿಸಿ ಮರು ನೇಮಕ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದ್ದಾರೆ.