ನವದೆಹಲಿ: ಶಾರದಾ ಚಿಟ್ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸೆಬಿಯ ಮೂವರು ಅಧಿಕಾರಿಗಳ ಕಚೇರಿಗಳಲ್ಲಿ ಸಿಬಿಐ ಸೋಮವಾರ ಶೋಧ ನಡೆಸಿತು.
‘ಮೂವರು ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.
ಪಶ್ಚಿಮ ಬಂಗಾಳದ ಶಾರದಾ ಗ್ರೂಪ್ಸ್ ವಿರುದ್ಧ ಅನೇಕ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಮ್ಮನ್ನು ವಂಚಿಸಿದ್ದಾರೆ ಎಂದು ಸಾವಿರಾರು ಹೂಡಿಕೆದಾರರು ಆರೋಪಿಸಿದ್ದಾರೆ.
ಈ ಹಿಂದೆ ಸುಪ್ರೀಂಕೋರ್ಟ್, ಶಾರದಾ ಚಿಟ್ಫಂಡ್ ಹಗರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಅಲ್ಲದೆ ಸಿಬಿಐಗೆ ಬೇಕಾದ ಎಲ್ಲಾ ನೆರವು ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿತ್ತು.