<p><strong>ತಿರುವನಂತಪುರ (ಪಿಟಿಐ):</strong> ಕೇರಳ ರಾಜಕಾರಣದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದ ಸೌರಫಲಕ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಹಗರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಸರಿತಾ ನಾಯರ್ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಕೋಯಿಕ್ಕೋಡ್ನ ಕೋರ್ಟ್ ಬಂಧನ ವಾರಂಟ್ ಹೊರಡಿಸಿತ್ತು. ಇದರ ಬೆನ್ನಲ್ಲೇ, ಇಲ್ಲಿರುವ ಅವರ ನಿವಾಸದಲ್ಲಿ ಸರಿತಾ ಅವರನ್ನು ಬಂಧಿಸಿದ ಪೊಲೀಸರು ನಂತರ, ಕೋಯಿಕ್ಕೋಡ್ನಲ್ಲಿರುವ ಕೋರ್ಟ್ಗೆ ಹಾಜರುಪಡಿಸಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<p>ಸರಿತಾ ನಾಯರ್ ಹಾಗೂ ಬಿಜು ರಾಧಾಕೃಷ್ಣನ್ ಈ ಪ್ರಕರಣದ ಪ್ರಮುಖ ಆರೋಪಿಗಳು. ಅವರು ‘ಟೀಮ್ ಸೋಲಾರ್ ರಿನ್ಯೂಯೇಬಲ್ ಎನರ್ಜಿ ಸೊಲೂಷನ್ಸ್ ಕಂಪನಿ ಸ್ಥಾಪಿಸಿದ್ದರು. ಈ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಜನರಿಗೆ ಹಣ ಪಡೆದು ವಂಚಿಸಿದ ಆರೋಪ, ಕೆಲವರಿಗೆ ಏಜೆನ್ಸಿ ಕೊಡುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.</p>.<p>2012ರಲ್ಲಿ ಕೋಯಿಕ್ಕೋಡ್ನ ಅಬ್ದುಲ್ ಮಜೀದ್ ಎಂಬುವವರು, ‘ಸೌರಫಲಕ ಮಾರಾಟದ ಏಜೆನ್ಸಿ ಕೊಡುವುದಾಗಿ ಹೇಳಿ ತನ್ನಿಂದ ₹ 42.70 ಲಕ್ಷ ಪಡೆದು ಸರಿತಾ ಹಾಗೂ ಬಿಜು ವಂಚಿಸಿದ್ದಾರೆ’ ಎಂದು ದೂರು ನೀಡಿದ್ದರು. ನಂತರ 2018ರ ಜನವರಿ 25ಕ್ಕೆ ವಿಚಾರಣೆ ಆರಂಭವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ (ಪಿಟಿಐ):</strong> ಕೇರಳ ರಾಜಕಾರಣದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದ ಸೌರಫಲಕ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಹಗರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಸರಿತಾ ನಾಯರ್ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಕೋಯಿಕ್ಕೋಡ್ನ ಕೋರ್ಟ್ ಬಂಧನ ವಾರಂಟ್ ಹೊರಡಿಸಿತ್ತು. ಇದರ ಬೆನ್ನಲ್ಲೇ, ಇಲ್ಲಿರುವ ಅವರ ನಿವಾಸದಲ್ಲಿ ಸರಿತಾ ಅವರನ್ನು ಬಂಧಿಸಿದ ಪೊಲೀಸರು ನಂತರ, ಕೋಯಿಕ್ಕೋಡ್ನಲ್ಲಿರುವ ಕೋರ್ಟ್ಗೆ ಹಾಜರುಪಡಿಸಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<p>ಸರಿತಾ ನಾಯರ್ ಹಾಗೂ ಬಿಜು ರಾಧಾಕೃಷ್ಣನ್ ಈ ಪ್ರಕರಣದ ಪ್ರಮುಖ ಆರೋಪಿಗಳು. ಅವರು ‘ಟೀಮ್ ಸೋಲಾರ್ ರಿನ್ಯೂಯೇಬಲ್ ಎನರ್ಜಿ ಸೊಲೂಷನ್ಸ್ ಕಂಪನಿ ಸ್ಥಾಪಿಸಿದ್ದರು. ಈ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಜನರಿಗೆ ಹಣ ಪಡೆದು ವಂಚಿಸಿದ ಆರೋಪ, ಕೆಲವರಿಗೆ ಏಜೆನ್ಸಿ ಕೊಡುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.</p>.<p>2012ರಲ್ಲಿ ಕೋಯಿಕ್ಕೋಡ್ನ ಅಬ್ದುಲ್ ಮಜೀದ್ ಎಂಬುವವರು, ‘ಸೌರಫಲಕ ಮಾರಾಟದ ಏಜೆನ್ಸಿ ಕೊಡುವುದಾಗಿ ಹೇಳಿ ತನ್ನಿಂದ ₹ 42.70 ಲಕ್ಷ ಪಡೆದು ಸರಿತಾ ಹಾಗೂ ಬಿಜು ವಂಚಿಸಿದ್ದಾರೆ’ ಎಂದು ದೂರು ನೀಡಿದ್ದರು. ನಂತರ 2018ರ ಜನವರಿ 25ಕ್ಕೆ ವಿಚಾರಣೆ ಆರಂಭವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>