ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಉಗ್ರರ ದಾಳಿಗೆ ಸರಪಂಚ ಬಲಿ

Last Updated 15 ಏಪ್ರಿಲ್ 2022, 16:17 IST
ಅಕ್ಷರ ಗಾತ್ರ

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಪಠಣ್‌ ಪ್ರದೇಶದಲ್ಲಿ ಶುಕ್ರವಾರ ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸರಪಂಚರೊಬ್ಬರು ಹತ್ಯೆಯಾಗಿದ್ದಾರೆ.

ಗೋಶ್‌ಬುಗ್‌ ಪ್ರದೇಶದ ನಿವಾಸಿ ಮನ್ಸೂರ್‌ ಅಹ್ಮದ್‌ ಬಂಗ್ರೂ ಗುಂಡಿನ ದಾಳಿಗೆ ಬಲಿಯಾದವರು.

‘ಪಠಣ್‌ನ ರಾಖ್‌ ಪ್ರದೇಶ ಹಣ್ಣಿನ ತೋಟವೊಂದರಲ್ಲಿ ಗುಂಡಿನ ದಾಳಿಗೆ ಒಳಗಾಗಿ ಬಿದ್ದಿದ್ದ ಮನ್ಸೂರ್‌ ಅವರು ಆಸ್ಪತ್ರೆಗೆ ಕರೆತರುವ ವೇಳೆಗೆ ಮೃತಪಟ್ಟಿದ್ದರು’ ಎಂದು ವೈದ್ಯರು ತಿಳಿಸಿದ್ದಾರೆ.

‘ಬಾರಾಮುಲ್ಲದ ಪಠಣ್‌ ಪ್ರದೇಶದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಸ್ವತಂತ್ರ ಸರಪಂಚರೊಬ್ಬರು ಮೃತಪಟ್ಟಿದ್ದು, ದಾಳಿಯ ಪ್ರದೇಶವನ್ನು ಸುತ್ತುವರೆಯಲಾಗಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT