ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಉಗ್ರರ ಗುಂಡಿನ ದಾಳಿಗೆ ಸರಪಂಚ ಬಲಿ

Last Updated 9 ಮಾರ್ಚ್ 2022, 15:55 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಹೊರವಲಯದ ಖೋನ್‌ಮೋಹ್‌ ಪ್ರದೇಶದಲ್ಲಿ ಬುಧವಾರ ಉಗ್ರರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಪಿಡಿಪಿಯ ಸರಪಂಚರೊಬ್ಬರು ಮೃತಪಟ್ಟಿದ್ದಾರೆ.

ಸಮೀರ್‌ ಅಹ್ಮದ್‌ ಭಟ್‌ ಮೃತಪಟ್ಟವರು. 'ಉಗ್ರರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಸಮೀರ್‌ ಅಹ್ಮದ್‌ ಅವರ ಎದೆಯಲ್ಲಿ ಎರಡು ಗುಂಡುಗಳು ಹೊಕ್ಕಿದ್ದವು. ತಕ್ಷಣವೇ ಶಸ್ತ್ರಚಿಕಿತ್ಸೆ ನಡೆಸಿ ಗುಂಡುಗಳನ್ನು ಹೊರತೆಗೆಯಲಾಯಿತಾದರೂ ಅವರು ಬದುಕುಳಿಯಲಿಲ್ಲ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಲಷ್ಕರ್‌–ಎ–ತೈಬಾ–ಸಂಘಟನೆಯ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸಿ ಫ್ರಂಟ್‌ (ಟಿಆರ್‌ಎಫ್‌) ದಾಳಿಯ ಹೊಣೆ ಹೊತ್ತುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT