<p><strong>ಬೆಂಗಳೂರು:</strong> ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ಪಕ್ಷದ ನಾಯಕಿ ವಿ.ಕೆ. ಶಶಿಕಲಾ ಹಾಗೂ ಇತರರು, ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾಗುವ ಸಾಧ್ಯತೆ ಇದೆ.</p>.<p>ಕೊರೊನಾ ಸೋಂಕು ತಗುಲಿರುವುದರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ್ದ ಕಾರಾಗೃಹ ಅಧಿಕಾರಿಗಳು, ಶಶಿಕಲಾ ಸಹಿ ಪಡೆದು ಬಿಡುಗಡೆಗೆ ಬೇಕಾದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವುದಾಗಿ ಗೊತ್ತಾಗಿದೆ.</p>.<p>‘ಪಿಪಿಇ ಕಿಟ್ ಧರಿಸಿ ಆಸ್ಪತ್ರೆಯೊಳಗೆ ಹೋಗಿ ಶಶಿಕಲಾ ಸಹಿ ಪಡೆದಿರುವ ಕಾರಾಗೃಹದ ಸಿಬ್ಬಂದಿ, ಬಿಡುಗಡೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಆಸ್ಪತ್ರೆಯಿಂದಲೇ ಶಶಿಕಲಾ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದ್ದು, ಆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದು ಬಾಕಿ ಇದೆ’ ಎಂದು ಕಾರಾಗೃಹದ ಮೂಲಗಳು ಹೇಳಿವೆ.</p>.<p>‘ಶಶಿಕಲಾ ಆರೋಗ್ಯದ ಬಗ್ಗೆ ವೈದ್ಯರಿಂದಲೂ ಮಾಹಿತಿ ಪಡೆಯಲಾಗಿದೆ. ಬಿಡುಗಡೆಯಾದ ಕೂಡಲೇ ತಮಿಳುನಾಡಿನ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ. ಬಿಡುಗಡೆ ವೇಳೆ ಜನರು ಹೆಚ್ಚು ಸೇರುವ ಸಾಧ್ಯತೆ ಇದ್ದು, ಆಸ್ಪತ್ರೆ ಬಳಿ ಭದ್ರತೆ ಕೈಗೊಳ್ಳುವ ಬಗ್ಗೆಯೂ ಪೊಲೀಸರ ಜೊತೆ ಚರ್ಚಿಸಲಾಗಿದೆ’ ಎಂದೂ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ಪಕ್ಷದ ನಾಯಕಿ ವಿ.ಕೆ. ಶಶಿಕಲಾ ಹಾಗೂ ಇತರರು, ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾಗುವ ಸಾಧ್ಯತೆ ಇದೆ.</p>.<p>ಕೊರೊನಾ ಸೋಂಕು ತಗುಲಿರುವುದರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ್ದ ಕಾರಾಗೃಹ ಅಧಿಕಾರಿಗಳು, ಶಶಿಕಲಾ ಸಹಿ ಪಡೆದು ಬಿಡುಗಡೆಗೆ ಬೇಕಾದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವುದಾಗಿ ಗೊತ್ತಾಗಿದೆ.</p>.<p>‘ಪಿಪಿಇ ಕಿಟ್ ಧರಿಸಿ ಆಸ್ಪತ್ರೆಯೊಳಗೆ ಹೋಗಿ ಶಶಿಕಲಾ ಸಹಿ ಪಡೆದಿರುವ ಕಾರಾಗೃಹದ ಸಿಬ್ಬಂದಿ, ಬಿಡುಗಡೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಆಸ್ಪತ್ರೆಯಿಂದಲೇ ಶಶಿಕಲಾ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದ್ದು, ಆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದು ಬಾಕಿ ಇದೆ’ ಎಂದು ಕಾರಾಗೃಹದ ಮೂಲಗಳು ಹೇಳಿವೆ.</p>.<p>‘ಶಶಿಕಲಾ ಆರೋಗ್ಯದ ಬಗ್ಗೆ ವೈದ್ಯರಿಂದಲೂ ಮಾಹಿತಿ ಪಡೆಯಲಾಗಿದೆ. ಬಿಡುಗಡೆಯಾದ ಕೂಡಲೇ ತಮಿಳುನಾಡಿನ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ. ಬಿಡುಗಡೆ ವೇಳೆ ಜನರು ಹೆಚ್ಚು ಸೇರುವ ಸಾಧ್ಯತೆ ಇದ್ದು, ಆಸ್ಪತ್ರೆ ಬಳಿ ಭದ್ರತೆ ಕೈಗೊಳ್ಳುವ ಬಗ್ಗೆಯೂ ಪೊಲೀಸರ ಜೊತೆ ಚರ್ಚಿಸಲಾಗಿದೆ’ ಎಂದೂ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>