‘ಶಶಿಕಲಾ ಅವರನ್ನು ತಮಿಳುನಾಡಿನ ಗಡಿ ಹೊಸೂರಿನಿಂದಲೇ ಅದ್ದೂರಿಯಾಗಿ ಸ್ವಾಗತಿಸಲಾಗುವುದು. ಫೆಬ್ರುವರಿ 7ರಂದು ಬೆಳಿಗ್ಗೆ 9ಗಂಟೆಗೆ ಬೆಂಗಳೂರಿನಿಂದ ರಸ್ತೆ ಮೂಲಕ ಚೆನ್ನೈಗೆ ತೆರಳಲಿದ್ದಾರೆ. ಬಳಿಕ, ದಿವಂಗತ ನಾಯಕರಾದ ಸಿ.ಎನ್. ಅಣ್ಣಾದೊರೈ, ಎಂ.ಜಿ. ರಾಮಚಂದ್ರನ್ ಮತ್ತು ಜೆ. ಜಯಲಲಿತಾ ಅವರ ಸ್ಮಾರಕಗಳಿಗೆ ಭೇಟಿ ನೀಡುವ ಉದ್ದೇಶವಿದೆ. ಆದರೆ, ಈಗ ಅಮ್ಮ ಸ್ಮಾರಕವನ್ನು ಮುಚ್ಚಲಾಗಿದೆ. ಸ್ಮಾರಕವನ್ನು ಮುಚ್ಚಿರುವ ಉದ್ದೇಶವೇನು? ಶಶಿಕಲಾ ಅವರು ತಮಿಳುನಾಡಿಗೆ ಹಿಂತಿರುಗುತ್ತಿರುವ ಪರಿಣಾಮ ಈ ಕ್ರಮಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ.