ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲಿನಲ್ಲಿ ಜೈನ್‌ಗೆ ವಿಶೇಷ ಚಿಕಿತ್ಸೆ ಸ್ಥಗಿತ: ಕೋರ್ಟ್

Last Updated 26 ನವೆಂಬರ್ 2022, 16:03 IST
ಅಕ್ಷರ ಗಾತ್ರ

ನವದೆಹಲಿ: ನಿಯಮಗಳನ್ನು ಉಲ್ಲಂಘಿಸಿ ತಿಹಾರ್ ಜೈಲಿನೊಳಗೆ ಸಚಿವ ಸತ್ಯೇಂದರ್ ಜೈನ್ ಅವರಿಗೆ ನೀಡುತ್ತಿದ್ದ ‘ಆದ್ಯತೆಯ ಚಿಕಿತ್ಸೆ’ಯನ್ನು ಈಗ ಸ್ಥಗಿತಗೊಳಿಸಲಾಗಿದೆ ಎಂದು ದೆಹಲಿ ನ್ಯಾಯಾಲಯ ಶನಿವಾರ ಹೇಳಿದೆ.

ಧಾರ್ಮಿಕ ನಂಬಿಕೆಗಳಿಗೆ ಅನುಗುಣವಾಗಿ ವಿಶೇಷ ಆಹಾರ ಪದಾರ್ಥ ಒದಗಿಸುವಂತೆ ತಿಹಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಜೈನ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸುವಾಗ ವಿಶೇಷ ನ್ಯಾಯಾಧೀಶ ವಿಕಾಸ್‌ ಧುಲ್ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರಾಗೃಹ ಡಿ.ಜಿ ಅಥವಾ ಯಾವುದೇ ಪ್ರಾಧಿಕಾರದ ಆದೇಶವಿಲ್ಲದೆ, ಜೈಲಿನ ಸಿಬ್ಬಂದಿ ಜೈನ್ ಅವರಿಗೆ ಹಣ್ಣುಗಳು ಮತ್ತು ತರಕಾರಿಗಳು ಒದಗಿಸುತ್ತಿರುವುದನ್ನು ನ್ಯಾಯಾಲಯ ಗಮನಿಸಿದೆ. ಇದು ನಿಯಮಗಳ ಉಲ್ಲಂಘಯಾಗಿದೆ ಎಂದು ಹೇಳಿದರು.

ಅರ್ಜಿದಾರರಿಗೆ ಹಣ್ಣು ಮತ್ತು ತರಕಾರಿ ಒದಗಿಸುವುದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆ. ಏಕೆಂದರೆ ಎಲ್ಲಾ ರಾಜ್ಯಗಳು ಕೈದಿಗಳನ್ನು ಸಮಾನವಾಗಿ ಪರಿಗಣಿಸಲು ಬದ್ಧವಾಗಿವೆ. ಜಾತಿ, ಧರ್ಮ, ಲಿಂಗ, ಧರ್ಮ, ಸ್ಥಾನಮಾನ ಇತ್ಯಾದಿಗಳ ಆಧಾರದ ಮೇಲೆ ಯಾವುದೇ ತಾರತಮ್ಯ ಇರುವಂತಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT