<p class="title"><strong>ನವದೆಹಲಿ:</strong>ವಂದೇ ಭಾರತ್ ಮಿಷನ್ ಅಡಿ ಭಾರತಕ್ಕೆ ತೆರಳುವ ವಿಮಾನಗಳ ಹಾರಾಟಕ್ಕೆ ಸೌದಿ ಅರೇಬಿಯಾ ಅನುಮತಿ ನೀಡಿದೆ ಎಂದುಏರ್ ಇಂಡಿಯಾ ಎಕ್ಸ್ಪ್ರೆಸ್ ತಿಳಿಸಿದೆ.</p>.<p class="title">ಆದರೆ, ಭಾರತದಿಂದ ಸೌದಿ ಅರೇಬಿಯಾಕ್ಕೆ ಪ್ರಯಾಣಿಕ ವಿಮಾನಗಳು ಹಾರಾಟ ನಡೆಸುವುದಿಲ್ಲ ಎಂದುಏರ್ ಇಂಡಿಯಾ ಎಕ್ಸ್ಪ್ರೆಸ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.</p>.<p class="title">ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಭಾರತ ಮತ್ತು ವಿವಿಧ ದೇಶಗಳಿಂದ ಬರುವ ಮತ್ತು ಹೋಗುವ ವಿಮಾನಗಳ ಹಾರಾಟವನ್ನು ಮಂಗಳವಾರ ಸೌದಿ ಅರೇಬಿಯಾ ನಿರ್ಬಂಧಿಸಿತ್ತು.</p>.<p class="title">ಈ ಸಂಬಂಧ ಸೌದಿಯ ನಾಗರಿಕ ವಿಮಾನಯಾನ ಪ್ರಾಧಿಕಾರವು (ಜಿಎಸಿಎ) ಆದೇಶ ಹೊರಡಿಸಿದ್ದು, ‘ಭಾರತದ ಜತೆಗೆ ಬ್ರೆಜಿಲ್ ಮತ್ತು ಅರ್ಜೆಂಟೈನಾ ದೇಶಗಳಿಗೂ ಈ ನಿರ್ಬಂಧ ಅನ್ವಯವಾಗಲಿದೆ. ಸೌದಿಗೆ ಆಗಮಿಸುವ 14 ದಿನಗಳ ಮುಂಚಿತವಾಗಿ ಪ್ರಸ್ತಾವನೆಯನ್ನು ನೀಡಿರುವ ಯಾವುದೇ ವ್ಯಕ್ತಿಗೂ ಇದು ಅನ್ವಯಿಸುತ್ತದೆ’ ಎಂದು ತಿಳಿಸಿತ್ತು. ಈಮೂರೂ ದೇಶಗಳಿಂದ ಅಧಿಕೃತ ಆಹ್ವಾನ ಹೊಂದಿರುವವರಿಗೆ ಮಾತ್ರವೇ ಸೌದಿಗೆ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ ಎಂದು ಜಿಎಸಿಎ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>ವಂದೇ ಭಾರತ್ ಮಿಷನ್ ಅಡಿ ಭಾರತಕ್ಕೆ ತೆರಳುವ ವಿಮಾನಗಳ ಹಾರಾಟಕ್ಕೆ ಸೌದಿ ಅರೇಬಿಯಾ ಅನುಮತಿ ನೀಡಿದೆ ಎಂದುಏರ್ ಇಂಡಿಯಾ ಎಕ್ಸ್ಪ್ರೆಸ್ ತಿಳಿಸಿದೆ.</p>.<p class="title">ಆದರೆ, ಭಾರತದಿಂದ ಸೌದಿ ಅರೇಬಿಯಾಕ್ಕೆ ಪ್ರಯಾಣಿಕ ವಿಮಾನಗಳು ಹಾರಾಟ ನಡೆಸುವುದಿಲ್ಲ ಎಂದುಏರ್ ಇಂಡಿಯಾ ಎಕ್ಸ್ಪ್ರೆಸ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.</p>.<p class="title">ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಭಾರತ ಮತ್ತು ವಿವಿಧ ದೇಶಗಳಿಂದ ಬರುವ ಮತ್ತು ಹೋಗುವ ವಿಮಾನಗಳ ಹಾರಾಟವನ್ನು ಮಂಗಳವಾರ ಸೌದಿ ಅರೇಬಿಯಾ ನಿರ್ಬಂಧಿಸಿತ್ತು.</p>.<p class="title">ಈ ಸಂಬಂಧ ಸೌದಿಯ ನಾಗರಿಕ ವಿಮಾನಯಾನ ಪ್ರಾಧಿಕಾರವು (ಜಿಎಸಿಎ) ಆದೇಶ ಹೊರಡಿಸಿದ್ದು, ‘ಭಾರತದ ಜತೆಗೆ ಬ್ರೆಜಿಲ್ ಮತ್ತು ಅರ್ಜೆಂಟೈನಾ ದೇಶಗಳಿಗೂ ಈ ನಿರ್ಬಂಧ ಅನ್ವಯವಾಗಲಿದೆ. ಸೌದಿಗೆ ಆಗಮಿಸುವ 14 ದಿನಗಳ ಮುಂಚಿತವಾಗಿ ಪ್ರಸ್ತಾವನೆಯನ್ನು ನೀಡಿರುವ ಯಾವುದೇ ವ್ಯಕ್ತಿಗೂ ಇದು ಅನ್ವಯಿಸುತ್ತದೆ’ ಎಂದು ತಿಳಿಸಿತ್ತು. ಈಮೂರೂ ದೇಶಗಳಿಂದ ಅಧಿಕೃತ ಆಹ್ವಾನ ಹೊಂದಿರುವವರಿಗೆ ಮಾತ್ರವೇ ಸೌದಿಗೆ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ ಎಂದು ಜಿಎಸಿಎ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>