ಮೇಜರ್ ಜನರಲ್ (ನಿವೃತ್ತ) ಎಸ್.ಜಿ.ಒಂಬತ್ತುಕೆರೆ ಅವರು ಈ ಅರ್ಜಿ ಸಲ್ಲಿಸಿದ್ದು, ದೇಶದ್ರೋಹ ಕಾನೂನಿನಿಂದ ವಾಕ್ ಸ್ವಾತಂತ್ರ್ಯಕ್ಕೆ ಭಾರಿ ದುಷ್ಪರಿಣಾಮ ಉಂಟಾಗಿದ್ದು, ಸಂವಿಧಾನ ಒದಗಿಸಿರುವ ಮೂಲಭೂತ ಹಕ್ಕಾಗಿರುವ ಮುಕ್ತವಾಗಿ ಭಾವನೆ ವ್ಯಕ್ತಪಡಿಸುವುದಕ್ಕೆ ವಿನಾಕಾರಣ ನಿರ್ಬಂಧ ವಿಧಿಸಿದಂತಾಗಿದೆ ಎಂದು ಪ್ರತಿಪಾದಿಸಿದ್ದಾರೆ.