ಅಂತರಧರ್ಮೀಯ ಮದುವೆ ಆಗುವುದಕ್ಕಾಗಿ ಮತಾಂತರ ಆಗುವುದನ್ನು ತಡೆಯುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ‘ಕಾನೂನುಬಾಹಿರ ಮತಾಂತರ ನಿಷೇಧ ಸುಗ್ರೀವಾಜ್ಞೆ–2020’ ಜಾರಿಗೆ ತಂದಿದ್ದರೆ, ಉತ್ತರಾಖಂಡ ಸರ್ಕಾರವು ‘ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 2018’ ಅನ್ನು ಜಾರಿಗೆ ತಂದಿದೆ. ಈ ಎರಡೂ ಕಾಯ್ದೆಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ವಕೀಲ ವಿಶಾಲ್ ಠಾಕ್ರೆ ಮತ್ತು ಇತರರು ಹಾಗೂ ‘ಸಿಟಿಜನ್ ಫಾರ್ ಜಸ್ಟಿಸ್ ಎಂಡ್ ಪೀಸ್’ ಎಂಬ ಎನ್ಜಿಒ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿವೆ.