ನವದೆಹಲಿ: ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ವಿದೇಶ ಪ್ರಯಾಣ ಮಾಡಲು ಸುಪ್ರೀಂಕೋರ್ಟ್ ಸೋಮವಾರ ಅನುಮತಿ ನೀಡಿದೆ.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಅಶೋಕ್ ಭೂಷಣ್ ಅವರ ನೇತೃತ್ವದ ಪೀಠವು ‘ಕಾರ್ತಿ ಚಿದಂಬರಂಗೆ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದೆ. ಆದರೆ ನ್ಯಾಯಾಲಯಕ್ಕೆ ಸ್ಥಳದ ಸಂಪೂರ್ಣ ಮಾಹಿತಿ ಸಲ್ಲಿಸಬೇಕು ಮತ್ತು ₹2 ಕೋಟಿ ಭದ್ರತಾ ಠೇವಣಿ ಇರಿಸಬೇಕು’ ಎಂದು ಹೇಳಿದೆ.
ಈ ಅರ್ಜಿಗೆ ವಿರೋಧ ವ್ಯಕ್ತಪಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು, ಕಳೆದ ಬಾರಿ ₹10 ಕೋಟಿ ಠೇವಣಿಯೊಂದಿಗೆ ಚಿದಂಬರಂ ಅವರಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಲಾಗಿತ್ತು ಎಂದು ಹೇಳಿದರು.
‘ಕಾರ್ತಿ ಚಿದಂಬರಂ ಅವರು ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ₹2 ಕೋಟಿ ಠೇವಣಿ ಇರಿಸಬೇಕು. ಅವರಿಗೆ ಆರು ತಿಂಗಳ ಕಾಲ ವಿದೇಶಕ್ಕೆ ಪ್ರಯಣಿಸಲು ಅನುಮತಿ ನೀಡಲಾಗಿದೆ’ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಕಾರ್ತಿ ಅವರು ಏರ್ಸೆಲ್ ಮ್ಯಾಕ್ಸಿಸ್ನಲ್ಲಿನ ಹಣಅಕ್ರಮ ವರ್ಗಾವಣೆ ಪ್ರಕರಣ, ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಇಡಿ ಮತ್ತು ಸಿಬಿಐ ತನಿಖೆ ನಡೆಸುತ್ತಿದೆ.