ಇಂದು ಮುಖ್ಯ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ಪತ್ರ ಬರೆದಿರುವ ಘನ್ವಾತ್ ಅವರು, ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಸರ್ಕಾರ ಹೇಳಿದೆ. ಹಾಗಾಗಿ, ನಮ್ಮ ವರದಿಗೆ ಯಾವುದೇ ಮಹತ್ವವಿಲ್ಲ. ಆದರೆ, ಸಾರ್ವಜನಿಕರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಾವು ಮಾಡಿರುವ ಶಿಫಾರಸುಗಳಿಗೆ ಮಹತ್ವವಿದೆ ಎಂದು ಅವರು ತಿಳಿಸಿದ್ದಾರೆ.