‘ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಸರ್ಕಾರ ಪ್ರಕಟಿಸಿದ ನಂತರ, ಸಮಿತಿ ನೀಡಿರುವ ವರದಿಯು ಅಪ್ರಸ್ತುತ. ಆದರೆ, ಅದರ ಶಿಫಾರಸುಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಮುಖವಾಗಿವೆ’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.