<p><strong>ನವದೆಹಲಿ:</strong> ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೊ) 1994ರಲ್ಲಿ ನಡೆದಿದ್ದ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐ ಗುರುವಾರ ಆದೇಶಿಸಿದೆ.</p>.<p>ಇಸ್ರೊ ಹಿರಿಯ ವಿಜ್ಞಾನಿ ನಂಬಿ ನಾರಾಯಣನ್ ಅವರಿಗೆ ಸಂಬಂಧಿಸಿದ ಈ ಪ್ರಕರಣದ ಕುರಿತು ಉನ್ನತ ಮಟ್ಟದ ಸಮಿತಿಯ ವರದಿಯನ್ನು ಸಿಬಿಐಗೆ ನೀಡಬೇಕು ಎಂದು ನ್ಯಾಯಾಲಯ ಇದೇ ಸಂದರ್ಭದಲ್ಲಿ ಸೂಚಿಸಿದೆ.</p>.<p>ಉನ್ನತ ಮಟ್ಟದ ಸಮಿತಿಯ ವರದಿಯನ್ನು ಪ್ರಾಥಮಿಕ ತನಿಖೆಯ ಭಾಗವಾಗಿ ಸಿಬಿಐ ಪರಿಗಣಿಸಬಹುದು ಮತ್ತು ತನಿಖಾ ವರದಿಯನ್ನು ಮೂರು ತಿಂಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದುನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ನೇತೃತ್ವದ ಪೀಠ ಸೂಚಿಸಿದೆ.</p>.<p>ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ. ಜೈನ್ ಅವರ ನೇತೃತ್ವದ ತ್ರಿಸದಸ್ಯರ ಸಮಿತಿಯ ವರದಿಯನ್ನು ಎಲ್ಲಿಯೂ ಪ್ರಕಟಿಸಬಾರದು ಎಂದು ಸೂಚಿಸಲಾಗಿದೆ.</p>.<p>ಬೇಹುಗಾರಿಕೆ ಪ್ರಕರಣಕ್ಕೆ ಸಂಬಂದಿಸಿದಂತೆ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಪರಿಗಣಿಸಬೇಕು ಎಂದು ಕೇಂದ್ರ ಸರ್ಕಾರದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಈ ಆದೇಶ ಮಾಡಿದೆ.</p>.<p>‘ನಾರಾಯಣನ್ ಅವರ ಹೇಳಿಕೆಗಳನ್ನು ಮಾತ್ರ ದಾಖಲಿಸಲಾಗಿದೆ. ನನ್ನ ಹೇಳಿಕೆಗಳನ್ನು ಸಮಿತಿಯು ಆಲಿಸಿಲ್ಲ’ ಎಂದು ಮಾಜಿ ಡಿಜಿಪಿ ಸಿಬಿ ಮ್ಯಾಥೆವ್ಸ್ ಅವರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ಸಿಬಿ ಮ್ಯಾಥೆವ್ಸ್ ಅವರು ಆಗ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರಾಗಿದ್ದರು.</p>.<p>ಸಮಿತಿಯು ಈ ಪ್ರಕರಣದ ಬಗ್ಗೆ ಯಾವುದೇ ರೀತಿಯ ಅಧಿಕೃತ ತೀರ್ಪು ಪ್ರಕಟಿಸಿಲ್ಲ. ಆದರೆ, ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿದೆ. ಅಧಿಕಾರಿಗಳ ಲೋಪಗಳ ಬಗ್ಗೆ ಪರಿಶೀಲನೆ ಮಾಡಿದೆ ಎಂದು ಪೀಠವು ಹೇಳಿದೆ.</p>.<p>2018ರ ಸೆಪ್ಟೆಂಬರ್ 14ರಂದು ಸುಪ್ರೀಂ ಕೋರ್ಟ್ ಈ ಸಮಿತಿಯನ್ನು ರಚಿಸಿತ್ತು. ತ್ರಿಸದಸ್ಯರ ಸಮಿತಿಯು ಇತ್ತೀಚೆಗೆ ತನ್ನ ವರದಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು.</p>.<p>ಈ ಪ್ರಕರಣದಲ್ಲಿ ನಾರಾಯಣನ್ ಅವರನ್ನು ದೋಷಮುಕ್ತಗೊಳಿಸಲಾಗಿತ್ತು. ಜತೆಗೆ, ನಾರಾಯಣನ್ ಅವರಿಗೆ ₹50 ಲಕ್ಷ ಪರಿಹಾರ ನೀಡುವಂತೆ ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.</p>.<p>ಕೇರಳದಲ್ಲಿನ ಹಿರಿಯ ಪೊಲೀಸ್ ಅಧಿಕಾರಿಗಳು ನಾರಾಯಣನ್ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿದ್ದರು ಎಂದು ಸಿಬಿಐ ಹೇಳಿತ್ತು. ನಾರಾಯಣನ್ ಮೇಲಿನ ಆರೋಪ ಆಧಾರರಹಿತ ಎಂದು ಸಿಬಿಐ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೊ) 1994ರಲ್ಲಿ ನಡೆದಿದ್ದ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐ ಗುರುವಾರ ಆದೇಶಿಸಿದೆ.</p>.<p>ಇಸ್ರೊ ಹಿರಿಯ ವಿಜ್ಞಾನಿ ನಂಬಿ ನಾರಾಯಣನ್ ಅವರಿಗೆ ಸಂಬಂಧಿಸಿದ ಈ ಪ್ರಕರಣದ ಕುರಿತು ಉನ್ನತ ಮಟ್ಟದ ಸಮಿತಿಯ ವರದಿಯನ್ನು ಸಿಬಿಐಗೆ ನೀಡಬೇಕು ಎಂದು ನ್ಯಾಯಾಲಯ ಇದೇ ಸಂದರ್ಭದಲ್ಲಿ ಸೂಚಿಸಿದೆ.</p>.<p>ಉನ್ನತ ಮಟ್ಟದ ಸಮಿತಿಯ ವರದಿಯನ್ನು ಪ್ರಾಥಮಿಕ ತನಿಖೆಯ ಭಾಗವಾಗಿ ಸಿಬಿಐ ಪರಿಗಣಿಸಬಹುದು ಮತ್ತು ತನಿಖಾ ವರದಿಯನ್ನು ಮೂರು ತಿಂಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದುನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ನೇತೃತ್ವದ ಪೀಠ ಸೂಚಿಸಿದೆ.</p>.<p>ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ. ಜೈನ್ ಅವರ ನೇತೃತ್ವದ ತ್ರಿಸದಸ್ಯರ ಸಮಿತಿಯ ವರದಿಯನ್ನು ಎಲ್ಲಿಯೂ ಪ್ರಕಟಿಸಬಾರದು ಎಂದು ಸೂಚಿಸಲಾಗಿದೆ.</p>.<p>ಬೇಹುಗಾರಿಕೆ ಪ್ರಕರಣಕ್ಕೆ ಸಂಬಂದಿಸಿದಂತೆ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಪರಿಗಣಿಸಬೇಕು ಎಂದು ಕೇಂದ್ರ ಸರ್ಕಾರದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಈ ಆದೇಶ ಮಾಡಿದೆ.</p>.<p>‘ನಾರಾಯಣನ್ ಅವರ ಹೇಳಿಕೆಗಳನ್ನು ಮಾತ್ರ ದಾಖಲಿಸಲಾಗಿದೆ. ನನ್ನ ಹೇಳಿಕೆಗಳನ್ನು ಸಮಿತಿಯು ಆಲಿಸಿಲ್ಲ’ ಎಂದು ಮಾಜಿ ಡಿಜಿಪಿ ಸಿಬಿ ಮ್ಯಾಥೆವ್ಸ್ ಅವರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ಸಿಬಿ ಮ್ಯಾಥೆವ್ಸ್ ಅವರು ಆಗ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರಾಗಿದ್ದರು.</p>.<p>ಸಮಿತಿಯು ಈ ಪ್ರಕರಣದ ಬಗ್ಗೆ ಯಾವುದೇ ರೀತಿಯ ಅಧಿಕೃತ ತೀರ್ಪು ಪ್ರಕಟಿಸಿಲ್ಲ. ಆದರೆ, ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿದೆ. ಅಧಿಕಾರಿಗಳ ಲೋಪಗಳ ಬಗ್ಗೆ ಪರಿಶೀಲನೆ ಮಾಡಿದೆ ಎಂದು ಪೀಠವು ಹೇಳಿದೆ.</p>.<p>2018ರ ಸೆಪ್ಟೆಂಬರ್ 14ರಂದು ಸುಪ್ರೀಂ ಕೋರ್ಟ್ ಈ ಸಮಿತಿಯನ್ನು ರಚಿಸಿತ್ತು. ತ್ರಿಸದಸ್ಯರ ಸಮಿತಿಯು ಇತ್ತೀಚೆಗೆ ತನ್ನ ವರದಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು.</p>.<p>ಈ ಪ್ರಕರಣದಲ್ಲಿ ನಾರಾಯಣನ್ ಅವರನ್ನು ದೋಷಮುಕ್ತಗೊಳಿಸಲಾಗಿತ್ತು. ಜತೆಗೆ, ನಾರಾಯಣನ್ ಅವರಿಗೆ ₹50 ಲಕ್ಷ ಪರಿಹಾರ ನೀಡುವಂತೆ ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.</p>.<p>ಕೇರಳದಲ್ಲಿನ ಹಿರಿಯ ಪೊಲೀಸ್ ಅಧಿಕಾರಿಗಳು ನಾರಾಯಣನ್ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿದ್ದರು ಎಂದು ಸಿಬಿಐ ಹೇಳಿತ್ತು. ನಾರಾಯಣನ್ ಮೇಲಿನ ಆರೋಪ ಆಧಾರರಹಿತ ಎಂದು ಸಿಬಿಐ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>