ನವದೆಹಲಿ: ಪ್ರಸಕ್ತಸಾಲಿನ 12ನೇ ತರಗತಿಯ ಪೂರಕ ಪರೀಕ್ಷೆಗಳ ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸಬೇಕು ಎಂದು ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ (ಸಿಬಿಎಸ್ಇ) ಸಲಹೆ ನೀಡಿರುವ ಸುಪ್ರೀಂ ಕೋರ್ಟ್, ವಿಶೇಷ ಸಂದರ್ಭವಾಗಿರುವ ಕಾರಣ ಈ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಸೂಚಿಸಿದೆ.