ಈ 615 ಮಹಿಳಾ ಅಧಿಕಾರಿಗಳ ಪೈಕಿ 422 ಅಧಿಕಾರಿಗಳು ಅರ್ಹತೆ ಆಧಾರದಲ್ಲಿ, ಕಾಯಂ ನೇಮಕಾತಿಗೆ ಅರ್ಹರಾಗಿದ್ದಾರೆ. ‘ಮಹಿಳಾ ಅಧಿಕಾರಿಗಳಿಗೆ ಕಾಯಂ ನೇಮಕಾತಿ ನೀಡುವ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರ ಫಲಿತಾಂಶ ಪ್ರಕಟಗೊಂಡಿದೆ’ ಎಂದು ಸರ್ಕಾರವು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ, ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ, ಇಂದೂ ಮಲ್ಹೋತ್ರ ಹಾಗೂ ಇಂದಿರಾ ಬ್ಯಾನರ್ಜಿ ಅವರಿದ್ದ ಪೀಠವು ಸ್ಥಿತಿಗತಿ ವರದಿ ನೀಡಲು ಸರ್ಕಾರಕ್ಕೆ ಸೂಚಿಸಿದೆ. ‘ಕಾಯಂ ನೇಮಕಾತಿಗೆ ಅರ್ಜಿ ಸಲ್ಲಿಸಿದ ಪ್ರತಿ ಅರ್ಜಿದಾರರ ಮಾಹಿತಿಯನ್ನೂ ನೀಡಬೇಕು’ ಎಂದು ಪೀಠವು ಹೇಳಿತು.