‘ಶುಕ್ರವಾರದಿಂದ ಆಯೋಗವು ಕಾರ್ಯಾರಂಭಿಸಿದ್ದು, ಇದಕ್ಕೆ ಸದಸ್ಯರನ್ನು ಸರ್ಕಾರವು ನೇಮಿಸಿದೆ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠವು, ‘ಆಯೋಗದ ರಚನೆ ಬಗ್ಗೆ ನಮಗೆ ಮಾಹಿತಿ ಬೇಕಿಲ್ಲ. ಇಂಥ ಹಲವು ಆಯೋಗಗಳು, ತಜ್ಞರು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದಾರೆ. ನಗರದಲ್ಲಿ ಹೊಂಜಿನ ವಾತಾವರಣ ಸೃಷ್ಟಿಯಾಗದಂತೆ ಖಾತ್ರಿಪಡಿಸಿ’ ಎಂದು ತಿಳಿಸಿತು. ಇದೇ ವೇಳೆ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ದೀಪಾವಳಿ ರಜೆಯ ಬಳಿಕ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಪೀಠವು ತಿಳಿಸಿತು.