<p><strong>ನವದೆಹಲಿ:</strong> ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ರಾಷ್ಟ್ರೀಯ ಕೋಟಾದಡಿ ಮೀಸಲಾತಿ ಪಡೆಯಲು ಆರ್ಥಿಕ ದುರ್ಬಲ ವರ್ಗದ (ಇಡಬ್ಲ್ಯುಎಸ್) ಅಭ್ಯರ್ಥಿಗಳ ವಾರ್ಷಿಕ ₹ 8 ಲಕ್ಷ ಆದಾಯ ಇರಬೇಕು ಎಂಬ ಮಾನದಂಡ ನಿಗದಿಪಡಿಸಲಾಗಿದೆ. ಈ ಮಾನದಂಡ ನಿಗದಿಯ ಹಿಂದಿರುವ ಕಾರಣಗಳನ್ನು ವಿವರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಸೂಚಿಸಿದೆ.</p>.<p>ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶ ನೀಡಲು, ‘ನೀಟ್’ನ ರಾಷ್ಟ್ರೀಯ ಕೋಟಾದಲ್ಲಿ ಒಬಿಸಿ ಹಾಗೂ ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ ಮೀಸಲಾತಿ ಜಾರಿಗೊಳಿಸಿ ಜುಲೈ 29ರಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಔರೆಲಿಯೊ ನ್ಯೂನ್ಸ್ ಹಾಗೂ ಇತರರು ಅರ್ಜಿಗಳನ್ನು ಸಲ್ಲಿಸಿದ್ದರು.</p>.<p>‘ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ವಾರ್ಷಿಕ ಆದಾಯ ₹ 8 ಲಕ್ಷ ಇರಬೇಕು ಎಂಬುದನ್ನು ನಿಗದಿ ಮಾಡುವಾಗ ಯಾವ ರೀತಿಯ ಪರಿಶೀಲನೆ ನಡೆಸಿದ್ದೀರಿ. ಒಬಿಸಿಗಳಿಗೆ ಅನ್ವಯವಾಗುವಂಥ ಮಾನದಂಡಗಳನ್ನೇ ಇಲ್ಲಿ ಅನ್ವಯಿಸಲಾಗಿದೆಯೇ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರನ್ನು ನ್ಯಾಯಪೀಠ ಪ್ರಶ್ನಿಸಿತು.</p>.<p>‘ಆದಾಯಕ್ಕೆ ಸಂಬಂಧಿಸಿದ ಮಾನದಂಡಗಳನ್ನು ದೇಶದಾದ್ಯಂತ ಏಕರೂಪವಾಗಿ ಅನ್ವಯಿಸಲಾಗದು. ಮುಂಬೈ ಮತ್ತು ಬೆಂಗಳೂರಿನಂಥ ನಗರಗಳಲ್ಲಿ ವಾಸಿಸುವ ವ್ಯಕ್ತಿಯ ವಾರ್ಷಿಕ ಆದಾಯವನ್ನು ಉತ್ತರ ಪ್ರದೇಶದ ಕೊನೆಯ ಗ್ರಾಮವೊಂದರ ನಿವಾಸಿಯ ಆದಾಯದೊಂದಿಗೆ ಹೋಲಿಸಲಾಗದು’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>ಈ ಕುರಿತು ಅಫಿಡವಿಟ್ ಸಲ್ಲಿಸಲು ಅವಕಾಶ ನೀಡುವಂತೆ ನಟರಾಜ್ ಮನವಿ ಮಾಡಿದರು. ಇದಕ್ಕೆ ಒಪ್ಪಿದ ನ್ಯಾಯಪೀಠ ವಿಚಾರಣೆಯನ್ನು ಅ.20ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ರಾಷ್ಟ್ರೀಯ ಕೋಟಾದಡಿ ಮೀಸಲಾತಿ ಪಡೆಯಲು ಆರ್ಥಿಕ ದುರ್ಬಲ ವರ್ಗದ (ಇಡಬ್ಲ್ಯುಎಸ್) ಅಭ್ಯರ್ಥಿಗಳ ವಾರ್ಷಿಕ ₹ 8 ಲಕ್ಷ ಆದಾಯ ಇರಬೇಕು ಎಂಬ ಮಾನದಂಡ ನಿಗದಿಪಡಿಸಲಾಗಿದೆ. ಈ ಮಾನದಂಡ ನಿಗದಿಯ ಹಿಂದಿರುವ ಕಾರಣಗಳನ್ನು ವಿವರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಸೂಚಿಸಿದೆ.</p>.<p>ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶ ನೀಡಲು, ‘ನೀಟ್’ನ ರಾಷ್ಟ್ರೀಯ ಕೋಟಾದಲ್ಲಿ ಒಬಿಸಿ ಹಾಗೂ ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ ಮೀಸಲಾತಿ ಜಾರಿಗೊಳಿಸಿ ಜುಲೈ 29ರಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಔರೆಲಿಯೊ ನ್ಯೂನ್ಸ್ ಹಾಗೂ ಇತರರು ಅರ್ಜಿಗಳನ್ನು ಸಲ್ಲಿಸಿದ್ದರು.</p>.<p>‘ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ವಾರ್ಷಿಕ ಆದಾಯ ₹ 8 ಲಕ್ಷ ಇರಬೇಕು ಎಂಬುದನ್ನು ನಿಗದಿ ಮಾಡುವಾಗ ಯಾವ ರೀತಿಯ ಪರಿಶೀಲನೆ ನಡೆಸಿದ್ದೀರಿ. ಒಬಿಸಿಗಳಿಗೆ ಅನ್ವಯವಾಗುವಂಥ ಮಾನದಂಡಗಳನ್ನೇ ಇಲ್ಲಿ ಅನ್ವಯಿಸಲಾಗಿದೆಯೇ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರನ್ನು ನ್ಯಾಯಪೀಠ ಪ್ರಶ್ನಿಸಿತು.</p>.<p>‘ಆದಾಯಕ್ಕೆ ಸಂಬಂಧಿಸಿದ ಮಾನದಂಡಗಳನ್ನು ದೇಶದಾದ್ಯಂತ ಏಕರೂಪವಾಗಿ ಅನ್ವಯಿಸಲಾಗದು. ಮುಂಬೈ ಮತ್ತು ಬೆಂಗಳೂರಿನಂಥ ನಗರಗಳಲ್ಲಿ ವಾಸಿಸುವ ವ್ಯಕ್ತಿಯ ವಾರ್ಷಿಕ ಆದಾಯವನ್ನು ಉತ್ತರ ಪ್ರದೇಶದ ಕೊನೆಯ ಗ್ರಾಮವೊಂದರ ನಿವಾಸಿಯ ಆದಾಯದೊಂದಿಗೆ ಹೋಲಿಸಲಾಗದು’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>ಈ ಕುರಿತು ಅಫಿಡವಿಟ್ ಸಲ್ಲಿಸಲು ಅವಕಾಶ ನೀಡುವಂತೆ ನಟರಾಜ್ ಮನವಿ ಮಾಡಿದರು. ಇದಕ್ಕೆ ಒಪ್ಪಿದ ನ್ಯಾಯಪೀಠ ವಿಚಾರಣೆಯನ್ನು ಅ.20ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>