<p><strong>ನವದೆಹಲಿ: </strong>ಕೊರೊನಾ ವೈರಾಣುವಿನ ಪಸರಿಸುವಿಕೆಯನ್ನು ತಡೆಯುವ ಸಲುವಾಗಿ ನಿರ್ಮಿಸಿರುವ ಸೋಂಕು ನಿವಾರಕ ಸುರಂಗಗಳು ಅಪಾಯಕಾರಿ ಎಂಬುದು ಗೊತ್ತಾದ ಮೇಲೂ ಅವುಗಳನ್ನು ಏಕೆ ನಿಷೇಧಿಸಿಲ್ಲ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.</p>.<p>ಸೋಂಕು ನಿವಾರಕ ಸುರಂಗಗಳು ಜನರನ್ನು ಅಪಾಯಕ್ಕೆ ತಳ್ಳುತ್ತಿವೆ. ಹೀಗಾಗಿ ಇವುಗಳ ಬಳಕೆ, ಸ್ಥಾಪನೆ, ಉತ್ಪಾದನೆ ಹಾಗೂ ಜಾಹೀರಾತುಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಗುರುಸಿಮ್ರನ್ ಸಿಂಗ್ ನರುಲಾ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ತ್ರಿಸದಸ್ಯ ಪೀಠ ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು.</p>.<p>ಜನರನ್ನು ಸೋಂಕು ಮುಕ್ತಗೊಳಿಸಲು ಅತಿನೆರಳೆ ಕಿರಣಗಳನ್ನು ಬಳಸುವಂತೆ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳಲ್ಲಿ ಹೇಳಿಯೇ ಇಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪೀಠಕ್ಕೆ ಮಾಹಿತಿ ನೀಡಿದರು.</p>.<p>ಮೈಮೇಲೆ ರಾಸಾಯನಿಕ ಸೋಂಕು ನಿವಾರಕಗಳ ಸಿಂಪಡಣೆಯಿಂದ ದೈಹಿಕ ಮತ್ತು ಮಾನಸಿಕ ಹಾನಿ ಉಂಟಾಗಬಹುದು ಎಂದೂ ಮೆಹ್ತಾ ತಿಳಿಸಿದರು.</p>.<p>‘ಸೋಂಕು ನಿವಾರಕ ಸುರಂಗಗಳು ಅಪಾಯಕಾರಿ ಎಂಬುದು ತಿಳಿದ ಮೇಲೆಯೂ ಕೇಂದ್ರ ಸರ್ಕಾರವು ಅವುಗಳನ್ನು ಏಕೆ ನಿಷೇಧಿಸುತ್ತಿಲ್ಲ’ ಎಂದು ಪೀಠವು ಮೆಹ್ತಾ ಅವರನ್ನು ಪ್ರಶ್ನಿಸಿತು.</p>.<p>‘ಈ ಸಂಬಂಧ ಸೂಕ್ತ ನಿರ್ದೇಶನ ನೀಡಲಾಗುವುದು’ ಎಂದು ಮೆಹ್ತಾ ಹೇಳಿದರು.</p>.<p>‘ಕೇಂದ್ರ ಸರ್ಕಾರವು ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಕಾರ್ಯಗತಗೊಳಿಸುವುದು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಜವಾಬ್ದಾರಿಯಾಗಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವು ಸೀಮಿತವಾದುದು’ ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೊರೊನಾ ವೈರಾಣುವಿನ ಪಸರಿಸುವಿಕೆಯನ್ನು ತಡೆಯುವ ಸಲುವಾಗಿ ನಿರ್ಮಿಸಿರುವ ಸೋಂಕು ನಿವಾರಕ ಸುರಂಗಗಳು ಅಪಾಯಕಾರಿ ಎಂಬುದು ಗೊತ್ತಾದ ಮೇಲೂ ಅವುಗಳನ್ನು ಏಕೆ ನಿಷೇಧಿಸಿಲ್ಲ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.</p>.<p>ಸೋಂಕು ನಿವಾರಕ ಸುರಂಗಗಳು ಜನರನ್ನು ಅಪಾಯಕ್ಕೆ ತಳ್ಳುತ್ತಿವೆ. ಹೀಗಾಗಿ ಇವುಗಳ ಬಳಕೆ, ಸ್ಥಾಪನೆ, ಉತ್ಪಾದನೆ ಹಾಗೂ ಜಾಹೀರಾತುಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಗುರುಸಿಮ್ರನ್ ಸಿಂಗ್ ನರುಲಾ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ತ್ರಿಸದಸ್ಯ ಪೀಠ ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು.</p>.<p>ಜನರನ್ನು ಸೋಂಕು ಮುಕ್ತಗೊಳಿಸಲು ಅತಿನೆರಳೆ ಕಿರಣಗಳನ್ನು ಬಳಸುವಂತೆ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳಲ್ಲಿ ಹೇಳಿಯೇ ಇಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪೀಠಕ್ಕೆ ಮಾಹಿತಿ ನೀಡಿದರು.</p>.<p>ಮೈಮೇಲೆ ರಾಸಾಯನಿಕ ಸೋಂಕು ನಿವಾರಕಗಳ ಸಿಂಪಡಣೆಯಿಂದ ದೈಹಿಕ ಮತ್ತು ಮಾನಸಿಕ ಹಾನಿ ಉಂಟಾಗಬಹುದು ಎಂದೂ ಮೆಹ್ತಾ ತಿಳಿಸಿದರು.</p>.<p>‘ಸೋಂಕು ನಿವಾರಕ ಸುರಂಗಗಳು ಅಪಾಯಕಾರಿ ಎಂಬುದು ತಿಳಿದ ಮೇಲೆಯೂ ಕೇಂದ್ರ ಸರ್ಕಾರವು ಅವುಗಳನ್ನು ಏಕೆ ನಿಷೇಧಿಸುತ್ತಿಲ್ಲ’ ಎಂದು ಪೀಠವು ಮೆಹ್ತಾ ಅವರನ್ನು ಪ್ರಶ್ನಿಸಿತು.</p>.<p>‘ಈ ಸಂಬಂಧ ಸೂಕ್ತ ನಿರ್ದೇಶನ ನೀಡಲಾಗುವುದು’ ಎಂದು ಮೆಹ್ತಾ ಹೇಳಿದರು.</p>.<p>‘ಕೇಂದ್ರ ಸರ್ಕಾರವು ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಕಾರ್ಯಗತಗೊಳಿಸುವುದು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಜವಾಬ್ದಾರಿಯಾಗಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವು ಸೀಮಿತವಾದುದು’ ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>