ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಸೇನಾ ಯಾರದ್ದೆಂಬ ಬಗ್ಗೆ ತಕ್ಷಣ ನಿರ್ಧಾರ ಬೇಡ: ಆಯೋಗಕ್ಕೆ ಸುಪ್ರೀಂ ಸಲಹೆ

Last Updated 4 ಆಗಸ್ಟ್ 2022, 10:47 IST
ಅಕ್ಷರ ಗಾತ್ರ

ನವದೆಹಲಿ: ‘ತಮ್ಮದೇ ನಿಜವಾದ ಶಿವಸೇನಾ ಎಂದು ಮಾನ್ಯ ಮಾಡಿ, ಚಿಹ್ನೆ ನೀಡಬೇಕು’ ಎಂಬ ಏಕನಾಥ ಶಿಂದೆ ಬಣದ ಮನವಿ ಕುರಿತಂತೆ ತಕ್ಷಣಕ್ಕೆ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ನ್ಯಾಯಪೀಠವು, ‘ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಗಳನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ಕುರಿತು ಸೋಮವಾರ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದೆ.

ಶಿಂದೆ ಬಣದ ಅರ್ಜಿಗೆ ಸಂಬಂಧಿಸಿದ ನೋಟಿಸ್‌ಗೆ ಉತ್ತರಿಸಲು ಠಾಕ್ರೆ ಬಣವು ಕಾಲಾವಕಾಶವನ್ನು ಕೇಳಿದರೆ, ಆ ಮನವಿಯನ್ನು ಪುರಸ್ಕರಿಸಬೇಕು ಮತ್ತು ಅಗತ್ಯ ಸಮಯ ನೀಡಬೇಕು ಎಂದೂ ಸುಪ್ರೀಂ ಕೋರ್ಟ್‌, ಆಯೋಗಕ್ಕೆ ನಿರ್ದೇಶಿಸಿತು.

ಸಂಬಂಧಿಸಿದ ವಕೀಲರು ಮಂಡಿಸುವ ವಾದವನ್ನು ಆಧರಿಸಿ ಈ ವಿಷಯವನ್ನು ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠಕ್ಕೆ ಒಪ್ಪಿಸುವುದರ ಕುರಿತು ನಿರ್ಧರಿಸಲಾಗುವುದು ಎಂದು ನ್ಯಾಯಪೀಠವು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT