ತಪ್ಪು ಅರಿವಿಗೆ ಬಂದ ಬಳಿಕ, ಬಾಂಬೆ ಹೈಕೋರ್ಟ್ನಲ್ಲಿ ಸಿದ್ಧಾಂತ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಪ್ರವೇಶ ಪ್ರಕ್ರಿಯೆ ನಿಯಮಾವಳಿಗಳನ್ನು ಪಾಲಿಸಬೇಕು ಮತ್ತು ಈಗಾಗಲೇ ಎಲ್ಲ ಸೀಟುಗಳು ಭರ್ತಿಯಾಗಿರುವುದರಿಂದ ಈ ಹಂತದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಐಐಟಿ ಬಾಂಬೆ ಸಲ್ಲಿಸಿದ್ದ ಉತ್ತರವನ್ನು ಪರಿಗಣಿಸಿ ಹೈಕೋರ್ಟ್ ಈ ಆದೇಶ ನೀಡಿತ್ತು.