<p><strong>ನವದೆಹಲಿ: </strong>ಕೋವಿಡ್ ನಡುವೆಯೂ ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡುವಂತೆ ಕೋರಿ ನಾಂದೇಡ್ ಗುರುದ್ವಾರ ಅಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಮಹಾರಾಷ್ಟ್ರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎಸ್ಡಿಎಂಎ) ಸೂಚಿಸಿದೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ಪೀಠವು ವಾಸ್ತವ ಸ್ಥಿತಿಯನ್ನು ಪರಿಗಣಿಸಿ ದಸರಾ ಮೆರವಣಿಗೆ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದೆ.</p>.<p>ಮಂಡಳಿಯು ಸಾಂಪ್ರದಾಯಿಕ ರೀತಿಯಲ್ಲಿ ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದೆ. ಆದರೆ, ಮಹಾರಾಷ್ಟ್ರ ಸರ್ಕಾರವು ಕೊರೊನಾ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾಂಪ್ರದಾಯಿಕವಾಗಿ ದಸರಾ ಮೆರವಣಿಗೆ ನಡೆಸುವುದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.</p>.<p>ಈ ಹಿನ್ನೆಲೆಯಲ್ಲಿ ನಾಂದೇಡ್ ಗುರುದ್ವಾರ ಆಡಳಿತ ಮಂಡಳಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡುವ ಬಗ್ಗೆ ಎಸ್ಡಿಎಂಎ ತೆಗೆದುಕೊಳ್ಳುವ ನಿರ್ಧಾರದಿಂದ ಸಮಾಧಾನವಾಗದಿದ್ದರೆ ಮಂಡಳಿಯು ಬಾಂಬೆ ಹೈಕೋರ್ಟ್ ಮೊರೆ ಹೋಗಬಹುದು ಎಂದು ಸುಪ್ರೀಂಕೋರ್ಟ್ನ ಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್ ನಡುವೆಯೂ ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡುವಂತೆ ಕೋರಿ ನಾಂದೇಡ್ ಗುರುದ್ವಾರ ಅಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಮಹಾರಾಷ್ಟ್ರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎಸ್ಡಿಎಂಎ) ಸೂಚಿಸಿದೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ಪೀಠವು ವಾಸ್ತವ ಸ್ಥಿತಿಯನ್ನು ಪರಿಗಣಿಸಿ ದಸರಾ ಮೆರವಣಿಗೆ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದೆ.</p>.<p>ಮಂಡಳಿಯು ಸಾಂಪ್ರದಾಯಿಕ ರೀತಿಯಲ್ಲಿ ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದೆ. ಆದರೆ, ಮಹಾರಾಷ್ಟ್ರ ಸರ್ಕಾರವು ಕೊರೊನಾ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾಂಪ್ರದಾಯಿಕವಾಗಿ ದಸರಾ ಮೆರವಣಿಗೆ ನಡೆಸುವುದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.</p>.<p>ಈ ಹಿನ್ನೆಲೆಯಲ್ಲಿ ನಾಂದೇಡ್ ಗುರುದ್ವಾರ ಆಡಳಿತ ಮಂಡಳಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡುವ ಬಗ್ಗೆ ಎಸ್ಡಿಎಂಎ ತೆಗೆದುಕೊಳ್ಳುವ ನಿರ್ಧಾರದಿಂದ ಸಮಾಧಾನವಾಗದಿದ್ದರೆ ಮಂಡಳಿಯು ಬಾಂಬೆ ಹೈಕೋರ್ಟ್ ಮೊರೆ ಹೋಗಬಹುದು ಎಂದು ಸುಪ್ರೀಂಕೋರ್ಟ್ನ ಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>