‘ಇಂದಿರಾ ಸಾಹ್ನಿ ಪ್ರಕರಣದಲ್ಲಿ ಉದ್ಭವಿಸಿರುವ ಪ್ರಶ್ನೆ ಎಂದರೆ, ಶೇ 50ರಷ್ಟು ಮೀಸಲಾತಿಯ ಮಿತಿಯನ್ನು ತೆಗೆದು ಹಾಕಬಹುದೇ ಎಂಬುದು. ಆದರೆ, ಈ ಪ್ರಕರಣದ ಬಗ್ಗೆ ಹಲವಾರು ದೃಷ್ಟಿಕೋನ ಗಳಿಂದ, ಸಾಕಷ್ಟು ಚರ್ಚೆಗಳು ನಡೆದಿವೆ. ನನ್ನ ಪ್ರಕಾರ ಈ ಪ್ರಕರಣವನ್ನು ಮರುಪರಿಶೀಲಿಸುವ ಅಗತ್ಯವಿಲ್ಲ‘ ಎಂದು ದಾತರ್ ಹೇಳಿದರು. ‘ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಶೇಕಡಾ 50 ರಷ್ಟು ಮೀಸಲಾತಿಯ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.