<p class="title"><strong>ನವದೆಹಲಿ</strong>: ದೇಶದ್ರೋಹಕ್ಕೆ ಸಂಬಂಧಿಸಿದಂತೆ ‘ವಸಾಹತುಶಾಹಿ ಕಾಲ’ದ ಕಾನೂನು ದುರುಪಯೋಗ ಆಗುತ್ತಿರುವುದಕ್ಕೆ ಗುರುವಾರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಈ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p class="title">ಈ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಎಡಿಟರ್ಸ್ ಗಿಲ್ಡ್ ಸೇರಿದಂತೆ ಕೆಲವರು ಸಲ್ಲಿಸಿರುವ ಅರ್ಜಿಗಳವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ನ್ಯಾಯಪೀಠವು, ಹಳೆಯ ಕಾನೂನುಗಳನ್ನು ರದ್ದುಪಡಿಸುತ್ತಿರುವ ಕೇಂದ್ರ ಸರ್ಕಾರ, ಈ ವಿಚಾರದಲ್ಲಿ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳಿತು.</p>.<p class="title">ಬ್ರಿಟಿಷರು ಜಾರಿಗೊಳಿಸಿದ ದೇಶದ್ರೋಹ ಕಾನೂನು ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕುವ ಉದ್ದೇಶ ಹೊಂದಿತ್ತು. ಮಹಾತ್ಮ ಗಾಂಧಿ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಸುಮ್ಮನಿರಿಸಲು ಬ್ರಿಟಿಷರು ಈ ಕಾಯ್ದೆಯನ್ನು ಬಳಸಿಕೊಂಡರು ಎಂದು ಪೀಠ ತಿಳಿಸಿತು.</p>.<p class="title">ಈ ಕಾನೂನಿನ ಸಿಂಧುತ್ವವನ್ನ ಸಮರ್ಥಿಕೊಳ್ಳುವಾಗ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ದೇಶದ್ರೋಹ ಕಾನೂನಿನ ದುರುಪಯೋಗ ತಡೆಯಲು ಕೆಲ ಮಾರ್ಗಸೂಚಿಗಳನ್ನು ರೂಪಿಸಬಹುದು ಎಂದರು.</p>.<p class="title">ಐಪಿಸಿ ಸೆಕ್ಷನ್ 124ಎ (ದೇಶದ್ರೋಹ) ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಿವೃತ್ತ ಸೇನಾಧಿಕಾರಿ ಮೇಜರ್ ಜನರಲ್ ಎಸ್.ಜಿ.ಒಂಬತ್ತುಕೆರೆ ಅವರೂ ಅರ್ಜಿ ಸಲ್ಲಿಸಿದ್ದಾರೆ. ಇದು ಸಂವಿಧಾನವು ಮೂಲಭೂತ ಹಕ್ಕಿನಡಿ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಕ್ಕನ್ನು ಚ್ಯುತಿಗೊಳಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ದೇಶದ್ರೋಹಕ್ಕೆ ಸಂಬಂಧಿಸಿದಂತೆ ‘ವಸಾಹತುಶಾಹಿ ಕಾಲ’ದ ಕಾನೂನು ದುರುಪಯೋಗ ಆಗುತ್ತಿರುವುದಕ್ಕೆ ಗುರುವಾರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಈ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p class="title">ಈ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಎಡಿಟರ್ಸ್ ಗಿಲ್ಡ್ ಸೇರಿದಂತೆ ಕೆಲವರು ಸಲ್ಲಿಸಿರುವ ಅರ್ಜಿಗಳವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ನ್ಯಾಯಪೀಠವು, ಹಳೆಯ ಕಾನೂನುಗಳನ್ನು ರದ್ದುಪಡಿಸುತ್ತಿರುವ ಕೇಂದ್ರ ಸರ್ಕಾರ, ಈ ವಿಚಾರದಲ್ಲಿ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳಿತು.</p>.<p class="title">ಬ್ರಿಟಿಷರು ಜಾರಿಗೊಳಿಸಿದ ದೇಶದ್ರೋಹ ಕಾನೂನು ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕುವ ಉದ್ದೇಶ ಹೊಂದಿತ್ತು. ಮಹಾತ್ಮ ಗಾಂಧಿ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಸುಮ್ಮನಿರಿಸಲು ಬ್ರಿಟಿಷರು ಈ ಕಾಯ್ದೆಯನ್ನು ಬಳಸಿಕೊಂಡರು ಎಂದು ಪೀಠ ತಿಳಿಸಿತು.</p>.<p class="title">ಈ ಕಾನೂನಿನ ಸಿಂಧುತ್ವವನ್ನ ಸಮರ್ಥಿಕೊಳ್ಳುವಾಗ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ದೇಶದ್ರೋಹ ಕಾನೂನಿನ ದುರುಪಯೋಗ ತಡೆಯಲು ಕೆಲ ಮಾರ್ಗಸೂಚಿಗಳನ್ನು ರೂಪಿಸಬಹುದು ಎಂದರು.</p>.<p class="title">ಐಪಿಸಿ ಸೆಕ್ಷನ್ 124ಎ (ದೇಶದ್ರೋಹ) ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಿವೃತ್ತ ಸೇನಾಧಿಕಾರಿ ಮೇಜರ್ ಜನರಲ್ ಎಸ್.ಜಿ.ಒಂಬತ್ತುಕೆರೆ ಅವರೂ ಅರ್ಜಿ ಸಲ್ಲಿಸಿದ್ದಾರೆ. ಇದು ಸಂವಿಧಾನವು ಮೂಲಭೂತ ಹಕ್ಕಿನಡಿ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಕ್ಕನ್ನು ಚ್ಯುತಿಗೊಳಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>