<p><strong>ನವದೆಹಲಿ</strong>: ಕೋವಿಡ್–19 ಸಾಂಕ್ರಾಮಿಕದಿಂದ ಮೃತಪಟ್ಟವರಿಗೆ ಮರಣ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸುವ ಕೆಲಸವು ವಿಳಂಬವಾಗುತ್ತಿರುವುದಕ್ಕೆ, ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>‘ನಾವು ಈ ಹಿಂದೆಯೇ ಈ ಬಗ್ಗೆ ಆದೇಶ ಹೊರಡಿಸಿದ್ದೇವೆ. ಈಗಾಗಲೇ ಒಂದು ಸಲ ಸಮಯಾವಕಾಶವನ್ನೂ ವಿಸ್ತರಿಸಿದ್ದೇವೆ. ಇನ್ನು ಮುಂದೆ ರೂಪಿಸುತ್ತೇವೆ ಎಂದರೆ, ನೀವು ಮಾರ್ಗಸೂಚಿ ರೂಪಿಸುವುದರೊಳಗಾಗಿ ಕೋವಿಡ್ ಮೂರನೇ ಅಲೆಯೂ ಬಂದು ಹೋಗುತ್ತದೆ’ ಎಂದು ನ್ಯಾಯಮೂರ್ತಿ ಎಂ.ಆರ್.ಶಾ ನೇತೃತ್ವದ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಈ ಪ್ರಕ್ರಿಯೆಯು ಜಾರಿಯಲ್ಲಿದೆ. ಶೀಘ್ರದಲ್ಲೇ ಅಂತಿಮಗೊಳಿಸಲಿದ್ದೇವೆ. ಅಂತಿಮ ಪ್ರಮಾಣಪತ್ರ ಸಲ್ಲಿಸಲು ಇನ್ನೂ ಸ್ಪಲ್ಪ ಸಮಯ ನೀಡಬೇಕು‘ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದಾಗ, ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಆರು ವಾರಗಳ ಒಳಗಾಗಿ ಮಾರ್ಗಸೂಚಿ ರೂಪಿಸುವಂತೆ ಸುಪ್ರೀಂ ಕೋರ್ಟ್, ಪ್ರಧಾನಿ ನೇತೃತ್ವದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆಜೂನ್ 30ರಂದು ನಿರ್ದೇಶಿಸಿತ್ತು.</p>.<p>ಆದರೆ, ಕೋವಿಡ್ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಸಂಬಂಧ ಸಮಗ್ರ ಯೋಜನೆ ರೂಪಿಸಬೇಕಿದ್ದು, ನಾಲ್ಕು ವಾರಗಳ ಹೆಚ್ಚುವರಿ ಸಮಯಾವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರವು ಆಗಸ್ಟ್ 16ರಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿತ್ತು.</p>.<p>ಜೂನ್ 30ರಂದು ನೀಡಿದ ನ್ಯಾಯಾಲಯದ ಆದೇಶದ ಅನುಪಾಲನಾ ವರದಿ (ಸೆ.11ರವರೆಗೆ) ಮತ್ತು ಸೆ.3ರವರೆಗೆ ಆಗಿರುವ ಕೆಲಸವೇನು ಎಂಬ ಬಗ್ಗೆಯೂ ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಪೀಠವು ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್–19 ಸಾಂಕ್ರಾಮಿಕದಿಂದ ಮೃತಪಟ್ಟವರಿಗೆ ಮರಣ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸುವ ಕೆಲಸವು ವಿಳಂಬವಾಗುತ್ತಿರುವುದಕ್ಕೆ, ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>‘ನಾವು ಈ ಹಿಂದೆಯೇ ಈ ಬಗ್ಗೆ ಆದೇಶ ಹೊರಡಿಸಿದ್ದೇವೆ. ಈಗಾಗಲೇ ಒಂದು ಸಲ ಸಮಯಾವಕಾಶವನ್ನೂ ವಿಸ್ತರಿಸಿದ್ದೇವೆ. ಇನ್ನು ಮುಂದೆ ರೂಪಿಸುತ್ತೇವೆ ಎಂದರೆ, ನೀವು ಮಾರ್ಗಸೂಚಿ ರೂಪಿಸುವುದರೊಳಗಾಗಿ ಕೋವಿಡ್ ಮೂರನೇ ಅಲೆಯೂ ಬಂದು ಹೋಗುತ್ತದೆ’ ಎಂದು ನ್ಯಾಯಮೂರ್ತಿ ಎಂ.ಆರ್.ಶಾ ನೇತೃತ್ವದ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಈ ಪ್ರಕ್ರಿಯೆಯು ಜಾರಿಯಲ್ಲಿದೆ. ಶೀಘ್ರದಲ್ಲೇ ಅಂತಿಮಗೊಳಿಸಲಿದ್ದೇವೆ. ಅಂತಿಮ ಪ್ರಮಾಣಪತ್ರ ಸಲ್ಲಿಸಲು ಇನ್ನೂ ಸ್ಪಲ್ಪ ಸಮಯ ನೀಡಬೇಕು‘ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದಾಗ, ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಆರು ವಾರಗಳ ಒಳಗಾಗಿ ಮಾರ್ಗಸೂಚಿ ರೂಪಿಸುವಂತೆ ಸುಪ್ರೀಂ ಕೋರ್ಟ್, ಪ್ರಧಾನಿ ನೇತೃತ್ವದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆಜೂನ್ 30ರಂದು ನಿರ್ದೇಶಿಸಿತ್ತು.</p>.<p>ಆದರೆ, ಕೋವಿಡ್ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಸಂಬಂಧ ಸಮಗ್ರ ಯೋಜನೆ ರೂಪಿಸಬೇಕಿದ್ದು, ನಾಲ್ಕು ವಾರಗಳ ಹೆಚ್ಚುವರಿ ಸಮಯಾವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರವು ಆಗಸ್ಟ್ 16ರಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿತ್ತು.</p>.<p>ಜೂನ್ 30ರಂದು ನೀಡಿದ ನ್ಯಾಯಾಲಯದ ಆದೇಶದ ಅನುಪಾಲನಾ ವರದಿ (ಸೆ.11ರವರೆಗೆ) ಮತ್ತು ಸೆ.3ರವರೆಗೆ ಆಗಿರುವ ಕೆಲಸವೇನು ಎಂಬ ಬಗ್ಗೆಯೂ ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಪೀಠವು ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>