<p><strong>ನವದೆಹಲಿ: </strong>ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ನ ಪೀಠ ಸ್ಥಾಪನೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ, ಕೈಗೊಂಡ ಕ್ರಮಗಳ ಕುರಿತ ವರದಿ ಹಾಗೂ ಈ ಸಂಬಂಧ ಬಾರ್ ಕೌನ್ಸಿಲ್ನ ಕೆಲ ಸದಸ್ಯರು ನಡೆಸಿದ್ದ ಸಭೆಯ ವಿವರಗಳನ್ನು ಬಹಿರಂಗಪಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.</p>.<p>ಮಹಾರಾಷ್ಟ್ರದ ಉಲ್ಲಾಸ್ನಗರದ ವಕೀಲ ಅಮೃತಪಾಲ್ ಸಿಂಗ್ ಖಾಲ್ಸಾ ಎಂಬುವವರು ಈ ವಿವರಗಳನ್ನು ಕೋರಿ ಆರ್ಟಿಐ ಅಡಿ ಅರ್ಜಿ ಸಲ್ಲಿಸಿದ್ದರು.</p>.<p>‘ಮೂರನೇ ಪಕ್ಷಗಾರರರೊಂದಿಗಿನ ನಂಬಿಕೆಗೆ ಸಂಬಂಧಿಸಿದ ವಿಷಯ ಇದಾಗಿದೆ. ಈ ಮಾಹಿತಿಯನ್ನು ನೀಡುವುದಕ್ಕೆಪಾರದರ್ಶಕತೆ ಕಾಯ್ದೆಯಡಿ ವಿನಾಯಿತಿಯನ್ನೂ ನೀಡಲಾಗಿದೆ’ ಎಂದು ಆರ್ಟಿಐ ಅರ್ಜಿಗೆ ನೀಡಿರುವ ಉತ್ತರದಲ್ಲಿ ಸುಪ್ರೀಂಕೋರ್ಟ್ ತಿಳಿಸಿದೆ.</p>.<p>ಬಾರ್ ಕೌನ್ಸಿಲ್ನ ಸದಸ್ಯರ ನಿಯೋಗವೊಂದು ಜುಲೈ 26ರಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿಗಳನ್ನು ಭೇಟಿ ಮಾಡಿ, ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ನ ಪೀಠ ಸ್ಥಾಪಿಸಬೇಕು ಎಂಬ ಬೇಡಿಕೆ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತ್ತು.</p>.<p>ಕೌನ್ಸಿಲ್ನ ಸದಸ್ಯರಾಗಿರುವ ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ವಕೀಲರು ಈ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ನ ಪೀಠ ಸ್ಥಾಪನೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ, ಕೈಗೊಂಡ ಕ್ರಮಗಳ ಕುರಿತ ವರದಿ ಹಾಗೂ ಈ ಸಂಬಂಧ ಬಾರ್ ಕೌನ್ಸಿಲ್ನ ಕೆಲ ಸದಸ್ಯರು ನಡೆಸಿದ್ದ ಸಭೆಯ ವಿವರಗಳನ್ನು ಬಹಿರಂಗಪಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.</p>.<p>ಮಹಾರಾಷ್ಟ್ರದ ಉಲ್ಲಾಸ್ನಗರದ ವಕೀಲ ಅಮೃತಪಾಲ್ ಸಿಂಗ್ ಖಾಲ್ಸಾ ಎಂಬುವವರು ಈ ವಿವರಗಳನ್ನು ಕೋರಿ ಆರ್ಟಿಐ ಅಡಿ ಅರ್ಜಿ ಸಲ್ಲಿಸಿದ್ದರು.</p>.<p>‘ಮೂರನೇ ಪಕ್ಷಗಾರರರೊಂದಿಗಿನ ನಂಬಿಕೆಗೆ ಸಂಬಂಧಿಸಿದ ವಿಷಯ ಇದಾಗಿದೆ. ಈ ಮಾಹಿತಿಯನ್ನು ನೀಡುವುದಕ್ಕೆಪಾರದರ್ಶಕತೆ ಕಾಯ್ದೆಯಡಿ ವಿನಾಯಿತಿಯನ್ನೂ ನೀಡಲಾಗಿದೆ’ ಎಂದು ಆರ್ಟಿಐ ಅರ್ಜಿಗೆ ನೀಡಿರುವ ಉತ್ತರದಲ್ಲಿ ಸುಪ್ರೀಂಕೋರ್ಟ್ ತಿಳಿಸಿದೆ.</p>.<p>ಬಾರ್ ಕೌನ್ಸಿಲ್ನ ಸದಸ್ಯರ ನಿಯೋಗವೊಂದು ಜುಲೈ 26ರಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿಗಳನ್ನು ಭೇಟಿ ಮಾಡಿ, ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ನ ಪೀಠ ಸ್ಥಾಪಿಸಬೇಕು ಎಂಬ ಬೇಡಿಕೆ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತ್ತು.</p>.<p>ಕೌನ್ಸಿಲ್ನ ಸದಸ್ಯರಾಗಿರುವ ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ವಕೀಲರು ಈ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>