<p><strong>ನವದೆಹಲಿ: </strong>ಮಾಟಮಂತ್ರ, ಮೂಢನಂಬಿಕೆ ಹಾಗೂ ಕಾಣಿಕೆ ಮತ್ತು ಹಣದ ಆಮಿಷವೊಡ್ಡುವ ಮೂಲಕ ಧಾರ್ಮಿಕ ಮತಾಂತರ ಮಾಡುವುದನ್ನು ನಿಯಂತ್ರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.<p>‘ಇದು ಪ್ರಚಾರದ ಹಿತಾಸಕ್ತಿ ಅರ್ಜಿಯಾಗಿದೆ. 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಿಕೊಳ್ಳಲು ಯಾಕೆ ಅವಕಾಶ ನೀಡಬಾರದು. ಈ ಬಗ್ಗೆ ಯಾವುದೇ ಕಾರಣಗಳಿಲ್ಲ’ ಎಂದು ನ್ಯಾಯಾಲಯ ಹೇಳಿದೆ.</p>.<p>ಅರ್ಜಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ಬಿ.ಆರ್. ಗವಾಯಿ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ಪೀಠವು, ಈ ಬಗ್ಗೆ ವಾದ ಮಂಡಿಸಿದರೆ ಅಪಾರ ದಂಡ ವಿಧಿಸಲಾಗುವುದು ಎಂದು ಅರ್ಜಿದಾರರಾದ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರಿಗೆ ಎಚ್ಚರಿಕೆ ನೀಡಿತು.</p>.<p>ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅರ್ಜಿಯನ್ನು ವಾಪಸ್ ಪಡೆಯಲಾಯಿತು.</p>.<p>‘ಪ್ರತಿ ವಾರ ದೇಶದಾದ್ಯಂತ ಹಲವಾರು ಮತಾಂತರ ಪ್ರಕರಣಗಳು ವರದಿಯಾಗುತ್ತಿವೆ. ಮತಾಂತರಗೊಳ್ಳುವಂತೆ ಬೆದರಿಕೆ ಹಾಗೂ ಹಣದ ಆಮಿಷವೊಡ್ಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ’ ಎಂದು ಅರ್ಜಿದಾರರು ದೂರಿದ್ದರು.</p>.<p>‘ಸರ್ಕಾರ ಮೌನವಾಗಿರುವುದರಿಂದ ಹಲವು ಸರ್ಕಾರೇತರ ಸಂಸ್ಥೆಗಳು ಬಡಜನರ ಮತಾಂತರದಲ್ಲಿ ತೊಡಗಿವೆ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರನ್ನು ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮಾಟಮಂತ್ರ, ಮೂಢನಂಬಿಕೆ ಹಾಗೂ ಕಾಣಿಕೆ ಮತ್ತು ಹಣದ ಆಮಿಷವೊಡ್ಡುವ ಮೂಲಕ ಧಾರ್ಮಿಕ ಮತಾಂತರ ಮಾಡುವುದನ್ನು ನಿಯಂತ್ರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.<p>‘ಇದು ಪ್ರಚಾರದ ಹಿತಾಸಕ್ತಿ ಅರ್ಜಿಯಾಗಿದೆ. 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಿಕೊಳ್ಳಲು ಯಾಕೆ ಅವಕಾಶ ನೀಡಬಾರದು. ಈ ಬಗ್ಗೆ ಯಾವುದೇ ಕಾರಣಗಳಿಲ್ಲ’ ಎಂದು ನ್ಯಾಯಾಲಯ ಹೇಳಿದೆ.</p>.<p>ಅರ್ಜಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ಬಿ.ಆರ್. ಗವಾಯಿ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ಪೀಠವು, ಈ ಬಗ್ಗೆ ವಾದ ಮಂಡಿಸಿದರೆ ಅಪಾರ ದಂಡ ವಿಧಿಸಲಾಗುವುದು ಎಂದು ಅರ್ಜಿದಾರರಾದ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರಿಗೆ ಎಚ್ಚರಿಕೆ ನೀಡಿತು.</p>.<p>ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅರ್ಜಿಯನ್ನು ವಾಪಸ್ ಪಡೆಯಲಾಯಿತು.</p>.<p>‘ಪ್ರತಿ ವಾರ ದೇಶದಾದ್ಯಂತ ಹಲವಾರು ಮತಾಂತರ ಪ್ರಕರಣಗಳು ವರದಿಯಾಗುತ್ತಿವೆ. ಮತಾಂತರಗೊಳ್ಳುವಂತೆ ಬೆದರಿಕೆ ಹಾಗೂ ಹಣದ ಆಮಿಷವೊಡ್ಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ’ ಎಂದು ಅರ್ಜಿದಾರರು ದೂರಿದ್ದರು.</p>.<p>‘ಸರ್ಕಾರ ಮೌನವಾಗಿರುವುದರಿಂದ ಹಲವು ಸರ್ಕಾರೇತರ ಸಂಸ್ಥೆಗಳು ಬಡಜನರ ಮತಾಂತರದಲ್ಲಿ ತೊಡಗಿವೆ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರನ್ನು ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>