ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಮತ್ತು ನ್ಯಾಯಮೂರ್ತಿ ಹೇಮಂತ್ ಗುಪ್ತ ಅವರನ್ನೊಳಗೊಂಡ ನ್ಯಾಯಪೀಠವು, ‘ಪಟಾಕಿ ನಿಷೇಧದ ಅರ್ಜಿಯನ್ನು ತುರ್ತಾಗಿ ಮಾಡಲಾಗದು. ದೀಪಾವಳಿ ಹತ್ತಿರದಲ್ಲಿದ್ದು, ಜನರು ಪಟಾಕಿಗಳ ವ್ಯಾಪಾರದಲ್ಲಿ ಹಣ ಹೂಡಿಕೆ ಮಾಡಿರುತ್ತಾರೆ. ನೀವು ಎರಡು ತಿಂಗಳು ಮುಂಚಿತವಾಗಿ ಬರಬೇಕಿತ್ತು’ ಎಂದು ಅರ್ಜಿದಾರರಿಗೆ ಸೂಚಿಸಿದೆ.