ತೆಲಂಗಾಣ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ದುಶ್ಯಂತ್ ದವೆ, ‘ಮಧ್ಯಪ್ರದೇಶದಲ್ಲಿ ರಾಜ್ಯಪಾಲರು ಏಳು ದಿನಗಳಲ್ಲಿ ಮಸೂದೆಗಳಿಗೆ ಅನುಮೋದನೆ ನೀಡಿದರೆ, ಗುಜರಾತ್ನಲ್ಲಿ ತಿಂಗಳೊಳಗೆ ಅನುಮೋದನೆ ನೀಡಲಾಗಿದೆ. ತೆಲಂಗಾಣದಲ್ಲಿ ಏಕೆ ವಿಳಂಬವಾಗುತ್ತಿದೆ? ಸಾಲಿಸಿಟರ್ ಜನರಲ್ ಅವರು ಮಧ್ಯಪ್ರವೇಶಿಸಬೇಕು ಮತ್ತು ಅವರು ರಾಜ್ಯಪಾಲರಿಗೆ ಸಲಹೆ ನೀಡಬಹುದು’ ಎಂದು ಹೇಳಿದರು.