<p class="title"><strong>ನವದೆಹಲಿ:</strong> ಆರ್ಎಸ್ಎಸ್ಗೆ ಮೆರವಣಿಗೆ ನಡೆಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಂದೂಡಿದೆ.</p>.<p>ಕಳೆದ ವರ್ಷ ಸೆ. 22 ರಂದು ಆರ್ಎಸ್ಎಸ್ ಪ್ರಾತಿನಿಧ್ಯವನ್ನು ಪರಿಗಣಿಸಿ ಷರತ್ತುಗಳಿಲ್ಲದೆ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶಿಸಿದ ಮೂಲ ಆದೇಶವನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದರು.</p>.<p>ಬಳಿಕ ನ್ಯಾಯಮೂರ್ತಿಗಳಾದ ವಿ. ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿತ್ತಲ್ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಮಾರ್ಚ್ 27 ಕ್ಕೆ ಮುಂದೂಡಿದರು.</p>.<p>ಆರ್ಎಸ್ಎಸ್ ಪರ ವಾದ ಮಂಡಿಸಿದ ವಕೀಲರು, ಪ್ರಕರಣದ ಕೊನೆಯ ವಿಚಾರಣೆಯಲ್ಲಿ ಮೆರವಣಿಗೆಗೆ ಅವಕಾಶ ನೀಡುವ ಕುರಿತು ಪರ್ಯಾಯ ಪ್ರಸ್ತಾವನೆಗಳನ್ನು ನೀಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿತು ಎಂದರು. </p>.<p>‘ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಮಾತನಾಡಲಾಗಿದೆ. ಅವರು ಮೊದಲು ಮೇಲ್ಮನವಿ ಸಲ್ಲಿಸಿ, ನಂತರ ಪರ್ಯಾಯ ಪ್ರಸ್ತಾಪಗಳನ್ನು ನೀಡುತ್ತಾರೆ’ ಎಂದು ರೋಹಟಗಿ ಮಾಹಿತಿ ನೀಡಿದರು.</p>.<p>ಮೇಲ್ಮನವಿ ಸಲ್ಲಿಸಲು ರಾಜ್ಯಕ್ಕೆ ಯಾವುದೇ ಹಕ್ಕಿಲ್ಲ ಎಂದು ಆರ್ಎಸ್ಎಸ್ ವಕೀಲರು ಹೇಳುತ್ತಿಲ್ಲ. ಆದರೆ, ಪ್ರಸ್ತಾವನೆಗಳನ್ನು ಸಹ ನೀಡಿದರೆ ಉತ್ತಮವಾಗಿರುತ್ತಿತ್ತು ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಆರ್ಎಸ್ಎಸ್ಗೆ ಮೆರವಣಿಗೆ ನಡೆಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಂದೂಡಿದೆ.</p>.<p>ಕಳೆದ ವರ್ಷ ಸೆ. 22 ರಂದು ಆರ್ಎಸ್ಎಸ್ ಪ್ರಾತಿನಿಧ್ಯವನ್ನು ಪರಿಗಣಿಸಿ ಷರತ್ತುಗಳಿಲ್ಲದೆ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶಿಸಿದ ಮೂಲ ಆದೇಶವನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದರು.</p>.<p>ಬಳಿಕ ನ್ಯಾಯಮೂರ್ತಿಗಳಾದ ವಿ. ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿತ್ತಲ್ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಮಾರ್ಚ್ 27 ಕ್ಕೆ ಮುಂದೂಡಿದರು.</p>.<p>ಆರ್ಎಸ್ಎಸ್ ಪರ ವಾದ ಮಂಡಿಸಿದ ವಕೀಲರು, ಪ್ರಕರಣದ ಕೊನೆಯ ವಿಚಾರಣೆಯಲ್ಲಿ ಮೆರವಣಿಗೆಗೆ ಅವಕಾಶ ನೀಡುವ ಕುರಿತು ಪರ್ಯಾಯ ಪ್ರಸ್ತಾವನೆಗಳನ್ನು ನೀಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿತು ಎಂದರು. </p>.<p>‘ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಮಾತನಾಡಲಾಗಿದೆ. ಅವರು ಮೊದಲು ಮೇಲ್ಮನವಿ ಸಲ್ಲಿಸಿ, ನಂತರ ಪರ್ಯಾಯ ಪ್ರಸ್ತಾಪಗಳನ್ನು ನೀಡುತ್ತಾರೆ’ ಎಂದು ರೋಹಟಗಿ ಮಾಹಿತಿ ನೀಡಿದರು.</p>.<p>ಮೇಲ್ಮನವಿ ಸಲ್ಲಿಸಲು ರಾಜ್ಯಕ್ಕೆ ಯಾವುದೇ ಹಕ್ಕಿಲ್ಲ ಎಂದು ಆರ್ಎಸ್ಎಸ್ ವಕೀಲರು ಹೇಳುತ್ತಿಲ್ಲ. ಆದರೆ, ಪ್ರಸ್ತಾವನೆಗಳನ್ನು ಸಹ ನೀಡಿದರೆ ಉತ್ತಮವಾಗಿರುತ್ತಿತ್ತು ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>