<p><strong>ನವದೆಹಲಿ:</strong> ಲೈಂಗಿಕ ಕಾರ್ಯಕರ್ತೆಯರನ್ನು ಕೋವಿಡ್ ಪರಿಹಾರ ವ್ಯವಸ್ಥೆಯಿಂದ ಹೊರಗಿಡಲಾಗಿದ್ದು, ಅವರಿಗೆ ನೆರವು ಒದಗಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮಂಗಳವಾರ ನಿರ್ದೇಶನ ನೀಡಿದೆ.</p>.<p>‘ಕೋವಿಡ್–19 ಕಾರಣದಿಂದ ಲೈಂಗಿಕ ಕಾರ್ಯಕರ್ತೆಯರು ತೀವ್ರ ಸಮಸ್ಯೆ ಎದುರಿಸಿದ್ದಾರೆ. ಅವರ ಸಂಕಷ್ಟಗಳಿಗೂ ತುರ್ತಾಗಿ ಸ್ಪಂದಿಸಬೇಕು’ ಎಂದು ಒತ್ತಾಯಿಸಿ, ಕೋಲ್ಕತ್ತದ ಸರ್ಕಾರೇತರ ಸಂಸ್ಥೆ ‘ದರ್ಬಾರ್ ಮಹಿಳಾ ಸಮನ್ವಯ ಸಮಿತಿ’ಯು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅದನ್ನು ವಿಚಾರಣೆಗೆ ಎತ್ತಿಕೊಂಡ, ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ಪೀಠವು ಈ ನಿರ್ದೇಶನ ನೀಡಿದೆ.</p>.<p>ಗುರುತುಪತ್ರಕ್ಕಾಗಿ ಒತ್ತಾಯಿಸದೆಯೇ ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ವಿತರಣೆ ಹಾಗೂ ಅವರ ಖಾತೆಗಳಿಗೆ ನೇರ ಹಣದವರ್ಗಾವಣೆ ಮಾಡುವ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್, ಆರ್.ಎಸ್. ಪುರಿ ಹಾಗೂ ರಾಜ್ಯ ಸರ್ಕಾರಗಳ ಪರವಾಗಿ ಹಾಜರಾಗಿದ್ದ ವಕೀಲರಿಗೆ ಕೋರ್ಟ್ ಸೂಚನೆ ನೀಡಿದೆ.</p>.<p>‘ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಹಾಗೂ ತೆಲಂಗಾಣದ ಒಟ್ಟು 1.2 ಲಕ್ಷ ಲೈಂಗಿಕ ಕಾರ್ಯಕರ್ತೆಯರಲ್ಲಿ ಶೇ 96ರಷ್ಟು ಮಂದಿ ಆದಾಯ ಮೂಲವನ್ನೇ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ ಎಂಬುದು ಈಚೆಗೆ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ’ ಎಂದು ಎನ್ಜಿಒ ಪರ ವಕೀಲ ಆನಂದ್ ಗ್ರೋವರ್ ಕೋರ್ಟ್ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೈಂಗಿಕ ಕಾರ್ಯಕರ್ತೆಯರನ್ನು ಕೋವಿಡ್ ಪರಿಹಾರ ವ್ಯವಸ್ಥೆಯಿಂದ ಹೊರಗಿಡಲಾಗಿದ್ದು, ಅವರಿಗೆ ನೆರವು ಒದಗಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮಂಗಳವಾರ ನಿರ್ದೇಶನ ನೀಡಿದೆ.</p>.<p>‘ಕೋವಿಡ್–19 ಕಾರಣದಿಂದ ಲೈಂಗಿಕ ಕಾರ್ಯಕರ್ತೆಯರು ತೀವ್ರ ಸಮಸ್ಯೆ ಎದುರಿಸಿದ್ದಾರೆ. ಅವರ ಸಂಕಷ್ಟಗಳಿಗೂ ತುರ್ತಾಗಿ ಸ್ಪಂದಿಸಬೇಕು’ ಎಂದು ಒತ್ತಾಯಿಸಿ, ಕೋಲ್ಕತ್ತದ ಸರ್ಕಾರೇತರ ಸಂಸ್ಥೆ ‘ದರ್ಬಾರ್ ಮಹಿಳಾ ಸಮನ್ವಯ ಸಮಿತಿ’ಯು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅದನ್ನು ವಿಚಾರಣೆಗೆ ಎತ್ತಿಕೊಂಡ, ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ಪೀಠವು ಈ ನಿರ್ದೇಶನ ನೀಡಿದೆ.</p>.<p>ಗುರುತುಪತ್ರಕ್ಕಾಗಿ ಒತ್ತಾಯಿಸದೆಯೇ ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ವಿತರಣೆ ಹಾಗೂ ಅವರ ಖಾತೆಗಳಿಗೆ ನೇರ ಹಣದವರ್ಗಾವಣೆ ಮಾಡುವ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್, ಆರ್.ಎಸ್. ಪುರಿ ಹಾಗೂ ರಾಜ್ಯ ಸರ್ಕಾರಗಳ ಪರವಾಗಿ ಹಾಜರಾಗಿದ್ದ ವಕೀಲರಿಗೆ ಕೋರ್ಟ್ ಸೂಚನೆ ನೀಡಿದೆ.</p>.<p>‘ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಹಾಗೂ ತೆಲಂಗಾಣದ ಒಟ್ಟು 1.2 ಲಕ್ಷ ಲೈಂಗಿಕ ಕಾರ್ಯಕರ್ತೆಯರಲ್ಲಿ ಶೇ 96ರಷ್ಟು ಮಂದಿ ಆದಾಯ ಮೂಲವನ್ನೇ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ ಎಂಬುದು ಈಚೆಗೆ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ’ ಎಂದು ಎನ್ಜಿಒ ಪರ ವಕೀಲ ಆನಂದ್ ಗ್ರೋವರ್ ಕೋರ್ಟ್ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>