ಮಾಜಿ ಐಪಿಎಸ್ ಅಧಿಕಾರಿ ಆಗಿರುವ ಘೋಷ್ ಅವರು, ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಡೆರ್ಬಾಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು 2019ರ ಲೋಕಸಭಾ ಚುನಾವಣೆಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಹಾಗೂ ಬಂಧನದ ವಾರಂಟ್ ತಡೆಹಿಡಿಯಬೇಕು ಎಂದು ಕೋರಿ ಸೋಮವಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.