<p><strong>ನವದೆಹಲಿ: </strong>ಇಂದಿನಿಂದ 10 ದಿನಗಳಲ್ಲಿ ಮೌಲ್ಯಮಾಪನದ ಯೋಜನೆಯನ್ನು ರೂಪಿಸಿ ತಿಳಿಸಬೇಕು ಮತ್ತು ಆಂತರಿಕ ಮೌಲ್ಯಮಾಪನ ಫಲಿತಾಂಶಗಳನ್ನು ಜುಲೈ 31 ರೊಳಗೆ ಘೋಷಿಸಬೇಕು ಎಂದು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳ ಶಿಕ್ಷಣ ಮಂಡಳಿಗಳಿಗೆ ನಿರ್ದೇಶಿಸಿದೆ.</p>.<p>ಎಲ್ಲ ರಾಜ್ಯಗಳಲ್ಲಿ ಒಂದೇ ರೀತಿಯ ಮೌಲ್ಯಮಾಪನ ಯೋಜನೆ ಇರಬೇಕೆಂದು ಯಾವುದೇ ಆದೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರೀಂ ಕೋರ್ಟ್, ಪ್ರತಿ ಮಂಡಳಿಯು ಸ್ವಾಯತ್ತ ಮತ್ತು ವಿದ್ಯಾರ್ಥಿಗಳಿಗೆ ತನ್ನದೇ ಆದ ಮೌಲ್ಯಮಾಪನ ವಿಧಾನವನ್ನು ರೂಪಿಸಲು ಮುಕ್ತವಾಗಿದೆ ಎಂದು ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಪ್ರತಿ ಮಂಡಳಿಯು ತಮ್ಮದೇ ಆದ ಯೋಜನೆಯನ್ನು ರೂಪಿಸಿಕೊಳ್ಳಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಈ ಯೋಜನೆಯನ್ನು10 ದಿನಗಳ ಒಳಗೆ ಶೀಘ್ರವಾಗಿ ರೂಪಿಸಬೇಕು ಎಂಬುದನ್ನು ಖಚಿತಪಡಿಸಿಕೊಳ್ಳಲು ನಾವು ಮಂಡಳಿಗಳಿಗೆ ನಿರ್ದೇಶಿಸುತ್ತೇವೆ ಮತ್ತು ಸಿಬಿಎಸ್ಇ ಹಾಗೂ ಸಿಐಎಸ್ಇಗೆ ನಿಗಪಡಿಸಿರುವ ಸಮಯದಂತೆ ಜುಲೈ 31, 2021 ರೊಳಗೆ ಆಂತರಿಕ ಮೌಲ್ಯಮಾಪನ ಫಲಿತಾಂಶಗಳನ್ನು ಘೋಷಿಸಬೇಕು’ಎಂದು ನ್ಯಾಯಪೀಠ ಹೇಳಿದೆ.</p>.<p>ಕೋವಿಡ್ -19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ರಾಜ್ಯಗಳಿಗೆ ನಿರ್ದೇಶನ ಕೋರಿರುವ ಮನವಿಗಳ ಕುರಿತಂತೆ ವಿಚಾರಣೆ ನಡೆಸಿದ ಉನ್ನತ ನ್ಯಾಯಾಲಯ ಈ ಆದೇಶ ನೀಡಿದೆ.</p>.<p>‘ಪ್ರತಿ ಮಂಡಳಿಯು ತಮ್ಮದೇ ಆದ ಯೋಜನೆಯನ್ನು ರೂಪಿಸಬಹುದು ಎಂದು ನಾವು ಸ್ಪಷ್ಟಪಡಿಸುತ್ತೇವೆ. ಆದರೂ, ಸಂಬಂಧಪಟ್ಟ ಮಂಡಳಿಯು ರೂಪಿಸುವ ಯೋಜನೆಯ ನಿಖರತೆ ಮತ್ತು ಸಿಂಧುತ್ವವನ್ನು ನಾವು ಅನುಮೋದಿಸುತ್ತಿಲ್ಲ ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತ್ತೇವೆ ..’ಎಂದು ನ್ಯಾಯಪೀಠ ಹೇಳಿದೆ.</p>.<p>ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ವಿಚಾರಣೆಯ ಸಮಯದಲ್ಲಿ, ಸಾಂಕ್ರಾಮಿಕ ರೋಗದ ಮಧ್ಯೆ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜ್ಯ ಮಂಡಳಿಗಳು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲು ಏಕರೂಪದ ಯೋಜನೆಯನ್ನು ಹೊಂದಲು ಕೇಳಿಕೊಳ್ಳಬಹುದು ಎಂದು ನ್ಯಾಯಪೀಠಕ್ಕೆ ಹಾಜರಾದ ವಕೀಲರು ತಿಳಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅದು ಸ್ವೀಕಾರಾರ್ಹವಲ್ಲ. ಏಕೆಂದರೆ, ಪ್ರತಿ ರಾಜ್ಯ ಮಂಡಳಿಯು ತಮ್ಮದೇ ಆದ ಯೋಜನೆಯನ್ನು ಹೊಂದಿದೆ. ಇದು ಏಕರೂಪವಾಗಿರಲು ಸಾಧ್ಯವಿಲ್ಲ. ನಾವು ಏಕರೂಪದ ಯೋಜನೆಗಾಗಿ ನಿರ್ದೇಶಿಸಲು ಹೋಗುವುದಿಲ್ಲ. ಪ್ರತಿಯೊಂದು ಮಂಡಳಿಯು ತಮ್ಮದೇ ಆದ ಯೋಜನೆಯನ್ನು ರೂಪಿಸಿಕೊಳ್ಳಬೇಕಾಗುತ್ತದೆ, ’ ಎಂದು ಹೇಳಿದೆ, ಪ್ರತಿ ಮಂಡಳಿಯು ವಿಭಿನ್ನ ಮತ್ತು ಸ್ವಾಯತ್ತವಾಗಿದೆ ಎಂದು ಸ್ಪಷ್ಟಪಡಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಇಂದಿನಿಂದ 10 ದಿನಗಳಲ್ಲಿ ಮೌಲ್ಯಮಾಪನದ ಯೋಜನೆಯನ್ನು ರೂಪಿಸಿ ತಿಳಿಸಬೇಕು ಮತ್ತು ಆಂತರಿಕ ಮೌಲ್ಯಮಾಪನ ಫಲಿತಾಂಶಗಳನ್ನು ಜುಲೈ 31 ರೊಳಗೆ ಘೋಷಿಸಬೇಕು ಎಂದು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳ ಶಿಕ್ಷಣ ಮಂಡಳಿಗಳಿಗೆ ನಿರ್ದೇಶಿಸಿದೆ.</p>.<p>ಎಲ್ಲ ರಾಜ್ಯಗಳಲ್ಲಿ ಒಂದೇ ರೀತಿಯ ಮೌಲ್ಯಮಾಪನ ಯೋಜನೆ ಇರಬೇಕೆಂದು ಯಾವುದೇ ಆದೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರೀಂ ಕೋರ್ಟ್, ಪ್ರತಿ ಮಂಡಳಿಯು ಸ್ವಾಯತ್ತ ಮತ್ತು ವಿದ್ಯಾರ್ಥಿಗಳಿಗೆ ತನ್ನದೇ ಆದ ಮೌಲ್ಯಮಾಪನ ವಿಧಾನವನ್ನು ರೂಪಿಸಲು ಮುಕ್ತವಾಗಿದೆ ಎಂದು ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಪ್ರತಿ ಮಂಡಳಿಯು ತಮ್ಮದೇ ಆದ ಯೋಜನೆಯನ್ನು ರೂಪಿಸಿಕೊಳ್ಳಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಈ ಯೋಜನೆಯನ್ನು10 ದಿನಗಳ ಒಳಗೆ ಶೀಘ್ರವಾಗಿ ರೂಪಿಸಬೇಕು ಎಂಬುದನ್ನು ಖಚಿತಪಡಿಸಿಕೊಳ್ಳಲು ನಾವು ಮಂಡಳಿಗಳಿಗೆ ನಿರ್ದೇಶಿಸುತ್ತೇವೆ ಮತ್ತು ಸಿಬಿಎಸ್ಇ ಹಾಗೂ ಸಿಐಎಸ್ಇಗೆ ನಿಗಪಡಿಸಿರುವ ಸಮಯದಂತೆ ಜುಲೈ 31, 2021 ರೊಳಗೆ ಆಂತರಿಕ ಮೌಲ್ಯಮಾಪನ ಫಲಿತಾಂಶಗಳನ್ನು ಘೋಷಿಸಬೇಕು’ಎಂದು ನ್ಯಾಯಪೀಠ ಹೇಳಿದೆ.</p>.<p>ಕೋವಿಡ್ -19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ರಾಜ್ಯಗಳಿಗೆ ನಿರ್ದೇಶನ ಕೋರಿರುವ ಮನವಿಗಳ ಕುರಿತಂತೆ ವಿಚಾರಣೆ ನಡೆಸಿದ ಉನ್ನತ ನ್ಯಾಯಾಲಯ ಈ ಆದೇಶ ನೀಡಿದೆ.</p>.<p>‘ಪ್ರತಿ ಮಂಡಳಿಯು ತಮ್ಮದೇ ಆದ ಯೋಜನೆಯನ್ನು ರೂಪಿಸಬಹುದು ಎಂದು ನಾವು ಸ್ಪಷ್ಟಪಡಿಸುತ್ತೇವೆ. ಆದರೂ, ಸಂಬಂಧಪಟ್ಟ ಮಂಡಳಿಯು ರೂಪಿಸುವ ಯೋಜನೆಯ ನಿಖರತೆ ಮತ್ತು ಸಿಂಧುತ್ವವನ್ನು ನಾವು ಅನುಮೋದಿಸುತ್ತಿಲ್ಲ ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತ್ತೇವೆ ..’ಎಂದು ನ್ಯಾಯಪೀಠ ಹೇಳಿದೆ.</p>.<p>ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ವಿಚಾರಣೆಯ ಸಮಯದಲ್ಲಿ, ಸಾಂಕ್ರಾಮಿಕ ರೋಗದ ಮಧ್ಯೆ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜ್ಯ ಮಂಡಳಿಗಳು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲು ಏಕರೂಪದ ಯೋಜನೆಯನ್ನು ಹೊಂದಲು ಕೇಳಿಕೊಳ್ಳಬಹುದು ಎಂದು ನ್ಯಾಯಪೀಠಕ್ಕೆ ಹಾಜರಾದ ವಕೀಲರು ತಿಳಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅದು ಸ್ವೀಕಾರಾರ್ಹವಲ್ಲ. ಏಕೆಂದರೆ, ಪ್ರತಿ ರಾಜ್ಯ ಮಂಡಳಿಯು ತಮ್ಮದೇ ಆದ ಯೋಜನೆಯನ್ನು ಹೊಂದಿದೆ. ಇದು ಏಕರೂಪವಾಗಿರಲು ಸಾಧ್ಯವಿಲ್ಲ. ನಾವು ಏಕರೂಪದ ಯೋಜನೆಗಾಗಿ ನಿರ್ದೇಶಿಸಲು ಹೋಗುವುದಿಲ್ಲ. ಪ್ರತಿಯೊಂದು ಮಂಡಳಿಯು ತಮ್ಮದೇ ಆದ ಯೋಜನೆಯನ್ನು ರೂಪಿಸಿಕೊಳ್ಳಬೇಕಾಗುತ್ತದೆ, ’ ಎಂದು ಹೇಳಿದೆ, ಪ್ರತಿ ಮಂಡಳಿಯು ವಿಭಿನ್ನ ಮತ್ತು ಸ್ವಾಯತ್ತವಾಗಿದೆ ಎಂದು ಸ್ಪಷ್ಟಪಡಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>