ನವದೆಹಲಿ: ಕೋವಿಡ್–19 ಆಸ್ಪತ್ರೆಗಳಲ್ಲಿ ಇರುವ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಈ ಪರಿಶೀಲನೆ ನಡೆಸುವಂತೆ ಅದು ಸೂಚಿಸಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠವು, ‘ಕೋವಿಡ್–19 ಆಸ್ಪತ್ರೆಗಳುನಾಲ್ಕು ವಾರಗಳೊಳಗೆ ಅಗ್ನಿಶಾಮಕ ದಳದಿಂದ ಯಾವುದೇ ಆಕ್ಷೇಪವಿಲ್ಲ ಎಂದು ಸೂಚಿಸುವ ಎನ್ಒಸಿಯನ್ನು ಪಡೆಯಬೇಕು. ಇಲ್ಲದಿದ್ದರೆ ದಂಡನಾತ್ಮಕ ಕ್ರಮವನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿತು.
ಎನ್ಒಸಿ ಅವಧಿ ಮುಗಿದಿರುವ ಆಸ್ಪತ್ರೆಗಳು ಈ ನಾಲ್ಕು ವಾರಗಳಲ್ಲಿ ಅದನ್ನು ನವೀಕರಿಸಿಕೊಂಡು ಮಾಹಿತಿ ನೀಡಬೇಕು ಎಂದು ಪೀಠ ಹೇಳಿದೆ.
ಗುಜರಾತ್ನ ರಾಜ್ಕೋಟ್ನ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವು ರೋಗಿಗಳು ಮೃತಪಟ್ಟಿದ್ದರು. ಈ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಪೀಠವು ರಾಜ್ಯಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿದೆ.