ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಂಚಣಿ, ವೃದ್ಧಾಶ್ರಮ ಕುರಿತ ಸಮಗ್ರ ವರದಿಗೆ ಸುಪ್ರೀಂ ಸೂಚನೆ

Last Updated 6 ಅಕ್ಟೋಬರ್ 2022, 10:59 IST
ಅಕ್ಷರ ಗಾತ್ರ

ನವದೆಹಲಿ: ಪಿಂಚಣಿ ಸೌಲಭ್ಯ, ವೃದ್ಧಾಶ್ರಮಗಳ ಸ್ಥಾಪನೆ ಸೇರಿದಂತೆ ಹಿರಿಯ ನಾಗರಿಕರ ಕಲ್ಯಾಣ ಯೋಜನೆಗಳ ಜಾರಿ ಕುರಿತು ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾನ್ಷು ಧುಲಿಯಾ ಅವರಿದ್ದ ನ್ಯಾಯಪೀಠ ಈ ಅದೇಶ ನೀಡಿದ್ದು ಕಲ್ಯಾಣ ಯೋಜನೆಗಳ ಅನುಷ್ಠಾನ, ಪೋಷಕರು ಮತ್ತು ಹಿರಿಯ ನಾಗರಿಕ ಕಾಯ್ದೆಯ ಜಾರಿ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.

ರಾಜ್ಯ ಸರ್ಕಾರಗಳು ಎರಡು ತಿಂಗಳಲ್ಲಿ ಈ ವರದಿ ಸಲ್ಲಿಸಬೇಕು, ನಂತರದ ಒಂದು ತಿಂಗಳಲ್ಲಿ ಕೇಂದ್ರ ಸರ್ಕಾರವು ಪರಿಷ್ಕೃತ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಬೇಕು ಎಂದೂ ನ್ಯಾಯಪೀಠವು ಸೂಚಿಸಿದೆ.

ಪ್ರಾಥಮಿಕ ಆರೋಗ್ಯ ಸೇವೆ ಒಳಗೊಂಡಂತೆ ವೃದ್ಧಾಶ್ರಮಗಳನ್ನುದೇಶದಾದ್ಯಂತ ಸ್ಥಾಪಿಸಬೇಕು ಎಂದು ಕೋರಿ ಮಾಜಿ ಕಾನೂನು ಸಚಿವ ಅಶ್ವನಿಕುಮಾರ್ ಸಲ್ಲಿಸಿದ್ದ ಅರ್ಜಿ ಕುರಿತು ಈ ನಿರ್ದೇಶನ ನೀಡಿತು. 2023ರ ಜನವರಿಗೆ ವಿಚಾರಣೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT