<p><strong>ನವದೆಹಲಿ:</strong> ಹಾಥರಸ್ನ ದಲಿತ ಮಹಿಳೆಯ ಅತ್ಯಾಚಾರ ಹಾಗೂ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಸಾಕ್ಷಿಗಳನ್ನು ರಕ್ಷಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಅಕ್ಟೋಬರ್ 8ರೊಳಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಉತ್ತರ ಪ್ರದೇಶ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಮುಂದಾನಂತರ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ನಿರ್ದೇಶನ ನೀಡಿದೆ.</p>.<p>ಹಾಥರಸ್ ಘಟನೆಯನ್ನು ಭಯಾನಕ ಮತ್ತು ಅಸಾಧಾರಣ ಪ್ರಕರಣವೆಂದು ಹೇಳಿದ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಪೀಠ, ತನಿಖೆ ಸುಗಮವಾಗಿ ನಡೆಯುವುದನ್ನು ನ್ಯಾಯಾಲಯ ಖಚಿತಪಡಿಸುತ್ತದೆ ಎಂದು ಹೇಳಿದರು.</p>.<p>ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಹಾಥರಸ್ ಪ್ರಕರಣದ ಬಗ್ಗೆ ಹಲವು ರೀತಿಯಲ್ಲಿ ಸುದ್ದಿಗಳು ಹರಡಲು ಆರಂಭವಾಗಿವೆ. ಇದು ನಿಲ್ಲಬೇಕಿದೆ‘ ಎಂದು ನ್ಯಾಯಾಲಕ್ಕೆ ತಿಳಿಸಿದರು.</p>.<p>ಹಾಥರಸ್ ಪ್ರಕರಣದ ತನಿಖೆ ವಿಷಯದಲ್ಲಿ ಯಾವುದೇ ಹಿತಾಸಕ್ತಿ, ನಕಲಿ ಸಾಕ್ಷ್ಯಗಳು, ಸುಳ್ಳು ಹೇಳಿಕೆಗಳು ನುಸುಳಲು ಸಾಧ್ಯವಿಲ್ಲ‘ ಎಂದು ಹೇಳಿದ ಮೆಹ್ತಾ ಅವರು, ‘ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲೇ ಈ ಪ್ರಕರಣದ ತನಿಖೆ ನಡೆಸಬಹುದು ಎಂದು ಹತ್ರಾಸ್ ಪ್ರಕರಣದ ತನಿಖೆ ಸಿಬಿಐನಿಂದ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸಬಹುದು‘ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಾಥರಸ್ನ ದಲಿತ ಮಹಿಳೆಯ ಅತ್ಯಾಚಾರ ಹಾಗೂ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಸಾಕ್ಷಿಗಳನ್ನು ರಕ್ಷಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಅಕ್ಟೋಬರ್ 8ರೊಳಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಉತ್ತರ ಪ್ರದೇಶ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಮುಂದಾನಂತರ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ನಿರ್ದೇಶನ ನೀಡಿದೆ.</p>.<p>ಹಾಥರಸ್ ಘಟನೆಯನ್ನು ಭಯಾನಕ ಮತ್ತು ಅಸಾಧಾರಣ ಪ್ರಕರಣವೆಂದು ಹೇಳಿದ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಪೀಠ, ತನಿಖೆ ಸುಗಮವಾಗಿ ನಡೆಯುವುದನ್ನು ನ್ಯಾಯಾಲಯ ಖಚಿತಪಡಿಸುತ್ತದೆ ಎಂದು ಹೇಳಿದರು.</p>.<p>ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಹಾಥರಸ್ ಪ್ರಕರಣದ ಬಗ್ಗೆ ಹಲವು ರೀತಿಯಲ್ಲಿ ಸುದ್ದಿಗಳು ಹರಡಲು ಆರಂಭವಾಗಿವೆ. ಇದು ನಿಲ್ಲಬೇಕಿದೆ‘ ಎಂದು ನ್ಯಾಯಾಲಕ್ಕೆ ತಿಳಿಸಿದರು.</p>.<p>ಹಾಥರಸ್ ಪ್ರಕರಣದ ತನಿಖೆ ವಿಷಯದಲ್ಲಿ ಯಾವುದೇ ಹಿತಾಸಕ್ತಿ, ನಕಲಿ ಸಾಕ್ಷ್ಯಗಳು, ಸುಳ್ಳು ಹೇಳಿಕೆಗಳು ನುಸುಳಲು ಸಾಧ್ಯವಿಲ್ಲ‘ ಎಂದು ಹೇಳಿದ ಮೆಹ್ತಾ ಅವರು, ‘ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲೇ ಈ ಪ್ರಕರಣದ ತನಿಖೆ ನಡೆಸಬಹುದು ಎಂದು ಹತ್ರಾಸ್ ಪ್ರಕರಣದ ತನಿಖೆ ಸಿಬಿಐನಿಂದ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸಬಹುದು‘ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>