‘ಖಾಸಗಿತನದ ನೀತಿಯನ್ನು ಒಪ್ಪದಿದ್ದರೂ (ಅಪ್ಡೇಟ್) ಸಂದೇಶ ವಿನಿಮಯ ಮಾಡಲು ಬಳಕೆದಾರರಿಗೆ ಅವಕಾಶ ನೀಡುವುದಾಗಿ ವಾಟ್ಸ್ಆ್ಯಪ್ ತಿಳಿಸಿದೆ. ಈ ಕುರಿತು ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡಿದರೆ ನೀತಿಗೆ ವಿರೋಧ ವ್ಯಕ್ತಪಡಿಸಿರುವವರಿಗೆ ಅನುಕೂಲವಾಗಲಿದೆ. ಹೀಗಾಗಿ ರಾಷ್ಟ್ರೀಯ ಮಟ್ಟದ ಯಾವುದಾದರೂ ಐದು ಪತ್ರಿಕೆಗಳಿಗೆ ಈ ಕುರಿತು ಎರಡು ಬಾರಿ ಜಾಹೀರಾತು ನೀಡಿ’ ಎಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಶಿಕೇಷ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ವಾಟ್ಸ್ಆ್ಯಪ್ ಕಂಪನಿಗೆ ಸೂಚಿಸಿದೆ. ಈ ಕುರಿತ ವಿಚಾರಣೆಯನ್ನು ಏಪ್ರಿಲ್ 11ಕ್ಕೆ ಮುಂದೂಡಿದೆ.