<p><strong>ನವದೆಹಲಿ:</strong> ಅನಿಲ್ ದೇಶಮುಖ್ ಅವರು ಮಹಾರಾಷ್ಟ್ರದ ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಡೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ವರ್ಗಾವಣೆ ಮತ್ತು ಹುದ್ದೆ ನಿಯೋಜನೆಗೆ ಸಂಬಂಧಿಸಿದಂತೆ ಸಿಬಿಐ ಕೈಗೊಂಡಿರುವ ತನಿಖೆ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.<p>ಈ ಬಗ್ಗೆ ಬಾಂಬೆ ಹೈಕೋರ್ಟ್ ಜುಲೈ 22ರಂದು ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರನ್ನೊಳಗೊಂಡ ಪೀಠವು ತಿಳಿಸಿತು.</p>.<p>‘ಆರೋಪಕ್ಕೆ ಸಂಬಂಧಿಸಿದ ಎಲ್ಲ ಅಂಶಗಳ ಬಗ್ಗೆಯೂ ಸಿಬಿಐ ಸಮಗ್ರವಾಗಿ ತನಿಖೆ ಮಾಡಬೇಕು. ಸೀಮಿತ ವಿಷಯಗಳ ಬಗ್ಗೆ ಮಾತ್ರ ತನಿಖೆ ಕೈಗೊಳ್ಳುವಂತೆ ಸಿಬಿಐ ಅನ್ನು ನಿಯಂತ್ರಿಸುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸಬೇಕು. ಇಲ್ಲದಿದ್ದರೆ, ಸಾಂವಿಧಾನಿಕ ನ್ಯಾಯಾಲಯದ ಅಧಿಕಾರವನ್ನು ಕಡಿಮೆ ಮಾಡಿದಂತಾಗುತ್ತದೆ’ ಎಂದು ಪೀಠವು ಅಭಿಪ್ರಾಯಪಟ್ಟಿತು.</p>.<p>‘ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ವರ್ಗಾವಣೆ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಸಚಿನ್ ವಾಜೆ ಮರುನೇಮಕಕ್ಕೆ ಸಂಬಂಧಿಸಿದಂತೆ ತನಿಖೆಗೆ ಅವಕಾಶ ನೀಡುತ್ತಿಲ್ಲ. ಈ ಮೂಲಕ ರಾಜ್ಯ ಸರ್ಕಾರವು ಮಾಜಿ ಗೃಹ ಸಚಿವರನ್ನು ರಕ್ಷಿಸುತ್ತಿದೆ ಎನ್ನುವ ಭಾವನೆ ಸೃಷ್ಟಿಯಾಗುತ್ತಿದೆ’ ಎಂದು ಪೀಠವು ಹೇಳಿದೆ.</p>.<p>ಪೊಲೀಸ್ ಸಿಬ್ಬಂದಿಯ ವರ್ಗಾವಣೆ ಮತ್ತು ಹುದ್ದೆ ನಿಯೋಜನೆ ಹಾಗೂ ಸಚಿನ್ ವಾಜೆ ಮರುನೇಮಕಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮಾಡಬಹುದು ಎಂದು ಬಾಂಬೆ ಹೈಕೋರ್ಟ್ ಜುಲೈ 22ರಂದು ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅನಿಲ್ ದೇಶಮುಖ್ ಅವರು ಮಹಾರಾಷ್ಟ್ರದ ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಡೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ವರ್ಗಾವಣೆ ಮತ್ತು ಹುದ್ದೆ ನಿಯೋಜನೆಗೆ ಸಂಬಂಧಿಸಿದಂತೆ ಸಿಬಿಐ ಕೈಗೊಂಡಿರುವ ತನಿಖೆ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.<p>ಈ ಬಗ್ಗೆ ಬಾಂಬೆ ಹೈಕೋರ್ಟ್ ಜುಲೈ 22ರಂದು ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರನ್ನೊಳಗೊಂಡ ಪೀಠವು ತಿಳಿಸಿತು.</p>.<p>‘ಆರೋಪಕ್ಕೆ ಸಂಬಂಧಿಸಿದ ಎಲ್ಲ ಅಂಶಗಳ ಬಗ್ಗೆಯೂ ಸಿಬಿಐ ಸಮಗ್ರವಾಗಿ ತನಿಖೆ ಮಾಡಬೇಕು. ಸೀಮಿತ ವಿಷಯಗಳ ಬಗ್ಗೆ ಮಾತ್ರ ತನಿಖೆ ಕೈಗೊಳ್ಳುವಂತೆ ಸಿಬಿಐ ಅನ್ನು ನಿಯಂತ್ರಿಸುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸಬೇಕು. ಇಲ್ಲದಿದ್ದರೆ, ಸಾಂವಿಧಾನಿಕ ನ್ಯಾಯಾಲಯದ ಅಧಿಕಾರವನ್ನು ಕಡಿಮೆ ಮಾಡಿದಂತಾಗುತ್ತದೆ’ ಎಂದು ಪೀಠವು ಅಭಿಪ್ರಾಯಪಟ್ಟಿತು.</p>.<p>‘ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ವರ್ಗಾವಣೆ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಸಚಿನ್ ವಾಜೆ ಮರುನೇಮಕಕ್ಕೆ ಸಂಬಂಧಿಸಿದಂತೆ ತನಿಖೆಗೆ ಅವಕಾಶ ನೀಡುತ್ತಿಲ್ಲ. ಈ ಮೂಲಕ ರಾಜ್ಯ ಸರ್ಕಾರವು ಮಾಜಿ ಗೃಹ ಸಚಿವರನ್ನು ರಕ್ಷಿಸುತ್ತಿದೆ ಎನ್ನುವ ಭಾವನೆ ಸೃಷ್ಟಿಯಾಗುತ್ತಿದೆ’ ಎಂದು ಪೀಠವು ಹೇಳಿದೆ.</p>.<p>ಪೊಲೀಸ್ ಸಿಬ್ಬಂದಿಯ ವರ್ಗಾವಣೆ ಮತ್ತು ಹುದ್ದೆ ನಿಯೋಜನೆ ಹಾಗೂ ಸಚಿನ್ ವಾಜೆ ಮರುನೇಮಕಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮಾಡಬಹುದು ಎಂದು ಬಾಂಬೆ ಹೈಕೋರ್ಟ್ ಜುಲೈ 22ರಂದು ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>