<p class="title"><strong>ನವದೆಹಲಿ</strong>: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನಕ್ಕೆ ಸಮಿತಿಗಳನ್ನು ರಚಿಸಿರುವ ಗುಜರಾತ್ ಮತ್ತು ಉತ್ತರಾಖಂಡ ಸರ್ಕಾರಗಳ ನಿರ್ಧಾರವನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p>.<p class="bodytext">ಇಂತಹ ಸಮಿತಿಗಳನ್ನು ರಚಿಸಲು ರಾಜ್ಯ ಸರ್ಕಾರಗಳಿಗೆ ಸಂವಿಧಾನವು 162ನೇ ವಿಧಿಯಡಿ ಅಧಿಕಾರ ನೀಡಿದೆ. ಇದು ತಪ್ಪಲ್ಲ. ಹಾಗಾಗಿ ಈ ಅರ್ಜಿ ವಿಚಾರಣೆಗೆ ಪರಿಗಣಿಸಲಾಗದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ಪೀಠವು ಅರ್ಜಿದಾರರಾದ ವಕೀಲ ಅನೂಪ್ ಬರನ್ವಾಲ್ ಮತ್ತು ಇತರರಿಗೆ ಹೇಳಿದೆ. </p>.<p>ಯುಸಿಸಿ ಅನುಷ್ಠಾನದ ಪರಿಶೀಲನೆಗಾಗಿ ಎರಡೂ ರಾಜ್ಯ ಸರ್ಕಾರಗಳು ಸಮಿತಿಗಳನ್ನು ರಚಿಸಿರುವುದನ್ನು ಪಿಐಎಲ್ನಲ್ಲಿ ಪ್ರಶ್ನಿಸಲಾಗಿತ್ತು. </p>.<p>ವಿಚ್ಛೇದನ, ದತ್ತು ಸ್ವೀಕಾರ, ಪಿತ್ರಾರ್ಜಿತ, ಪಾಲನೆ ವಿಷಯದಲ್ಲಿ ಧರ್ಮ, ಲಿಂಗಭೇದವಿಲ್ಲದೆ ಎಲ್ಲ ನಾಗರಿಕರಿಗೂ ಒಂದೇ ರೀತಿಯ ಕಾನೂನು ಅನ್ವಯಿಸುವುದು ಯುಸಿಸಿಯ ಉದ್ದೇಶವಾಗಿದ್ದು, ಇದರ ಅನುಷ್ಠಾನಕ್ಕೆ ಕಾನೂನುಗಳ ತಿದ್ದುಪಡಿ ಪರಿಶೀಲನೆಗಾಗಿ ಗುಜರಾತ್ ಮತ್ತು ಉತ್ತರಾಖಂಡ ರಾಜ್ಯ ಸರ್ಕಾರಗಳು ತಜ್ಞರ ಸಮಿತಿಗಳನ್ನು ರಚಿಸಿವೆ.</p>.<p>ಏಕರೂಪದ ನಾಗರಿಕ ಸಂಹಿತೆಯ ವಿಷಯವು ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಕೇಂದ್ರ ಸರ್ಕಾರವು ಸಮರ್ಥಿಸಿಕೊಂಡಿದೆ. ಯುಸಿಸಿ ಜಾರಿಗೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನಕ್ಕೆ ಸಮಿತಿಗಳನ್ನು ರಚಿಸಿರುವ ಗುಜರಾತ್ ಮತ್ತು ಉತ್ತರಾಖಂಡ ಸರ್ಕಾರಗಳ ನಿರ್ಧಾರವನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p>.<p class="bodytext">ಇಂತಹ ಸಮಿತಿಗಳನ್ನು ರಚಿಸಲು ರಾಜ್ಯ ಸರ್ಕಾರಗಳಿಗೆ ಸಂವಿಧಾನವು 162ನೇ ವಿಧಿಯಡಿ ಅಧಿಕಾರ ನೀಡಿದೆ. ಇದು ತಪ್ಪಲ್ಲ. ಹಾಗಾಗಿ ಈ ಅರ್ಜಿ ವಿಚಾರಣೆಗೆ ಪರಿಗಣಿಸಲಾಗದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ಪೀಠವು ಅರ್ಜಿದಾರರಾದ ವಕೀಲ ಅನೂಪ್ ಬರನ್ವಾಲ್ ಮತ್ತು ಇತರರಿಗೆ ಹೇಳಿದೆ. </p>.<p>ಯುಸಿಸಿ ಅನುಷ್ಠಾನದ ಪರಿಶೀಲನೆಗಾಗಿ ಎರಡೂ ರಾಜ್ಯ ಸರ್ಕಾರಗಳು ಸಮಿತಿಗಳನ್ನು ರಚಿಸಿರುವುದನ್ನು ಪಿಐಎಲ್ನಲ್ಲಿ ಪ್ರಶ್ನಿಸಲಾಗಿತ್ತು. </p>.<p>ವಿಚ್ಛೇದನ, ದತ್ತು ಸ್ವೀಕಾರ, ಪಿತ್ರಾರ್ಜಿತ, ಪಾಲನೆ ವಿಷಯದಲ್ಲಿ ಧರ್ಮ, ಲಿಂಗಭೇದವಿಲ್ಲದೆ ಎಲ್ಲ ನಾಗರಿಕರಿಗೂ ಒಂದೇ ರೀತಿಯ ಕಾನೂನು ಅನ್ವಯಿಸುವುದು ಯುಸಿಸಿಯ ಉದ್ದೇಶವಾಗಿದ್ದು, ಇದರ ಅನುಷ್ಠಾನಕ್ಕೆ ಕಾನೂನುಗಳ ತಿದ್ದುಪಡಿ ಪರಿಶೀಲನೆಗಾಗಿ ಗುಜರಾತ್ ಮತ್ತು ಉತ್ತರಾಖಂಡ ರಾಜ್ಯ ಸರ್ಕಾರಗಳು ತಜ್ಞರ ಸಮಿತಿಗಳನ್ನು ರಚಿಸಿವೆ.</p>.<p>ಏಕರೂಪದ ನಾಗರಿಕ ಸಂಹಿತೆಯ ವಿಷಯವು ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಕೇಂದ್ರ ಸರ್ಕಾರವು ಸಮರ್ಥಿಸಿಕೊಂಡಿದೆ. ಯುಸಿಸಿ ಜಾರಿಗೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>